ಸಂಡೂರು ವಿಧಾನಸಭಾ ಉಪ ಚುನಾವಣೆಗೆ ಮೊದಲು ಸಿದ್ದರಾಮಯ್ಯ ಸರ್ಕಾರದ ಸಾಧನಾ ಸಮಾವೇಶ!

|

Updated on: Oct 14, 2024 | 11:56 AM

ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ಇನ್ನೂ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಿಲ್ಲ. ಸಂಡೂರಿನ ಜನ ತುಕಾರಾಮ್ ಅವರ ಪತ್ನಿ ಇಲ್ಲವೇ ಮಗನಿಗೆ ಟಿಕೆಟ್ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಅದೇನೇ ಇದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ ನೀಡುವ ಫೀಡ್​ಬ್ಯಾಕ್ ನಿರ್ಣಾಯಕವಾಗಲಿದೆ.

ಬಳ್ಳಾರಿ: ಜಿಲ್ಲೆಯ ಸಂಡೂರಿನಲ್ಲಿ ಇನ್ನೇನು ಕೆಲವೇ ನಿಮಿಷಗಳಲ್ಲಿ ಪ್ರಾರಂಭವಾಗಲಿರುವ ರಾಜ್ಯ ಸರ್ಕಾರದ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿಮ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ. ನಮ್ಮ ವರದಿಗಾರ ಹೇಳುವಂತೆ ಮುಂಬರುವ ಸಂಡೂರು ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಸಿದ್ದರಾಮಯ್ಯ ಈ ವೇದಿಕೆಯನ್ನು ಲಾಂಚ್ ಪ್ಯಾಡ್ ಆಗಿ ಬಳಸಲಿದ್ದಾರೆ. ಇಲ್ಲಿನ ಶಾಸಕ ಈ ತುಕಾರಾಮ್ ಸಂಸತ್ತಿಗೆ ಆಯ್ಕೆಯಾಗಿರುವುದರಿಂದ ಉಪ ಚುನಾವಣೆ ನಡೆಯೋದು ಅನಿವಾರ್ಯವಾಗಿಬಿಟ್ಟಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಜನಾರ್ದನ್ ರೆಡ್ಡಿ ಬಳ್ಳಾರಿ ಪ್ರವೇಶಕ್ಕೆ ಮುಕ್ತ ಅವಕಾಶ: ಸಂಡೂರು ಉಪ ಚುನಾವಣೆಯಲ್ಲಿ ಬಿಜೆಪಿಗೆ ಆನೆ ಬಲ

Follow us on