AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಹೋರಾಟದ ವಿಷಯ ಕೇಳಿ ಸರ್ಕಾರಕ್ಕೆ ತಳಮಳ ಶುರುವಾಗಿದೆ: ನಿಖಿಲ್ ಕುಮಾರಸ್ವಾಮಿ

ನಮ್ಮ ಹೋರಾಟದ ವಿಷಯ ಕೇಳಿ ಸರ್ಕಾರಕ್ಕೆ ತಳಮಳ ಶುರುವಾಗಿದೆ: ನಿಖಿಲ್ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Apr 12, 2025 | 10:17 AM

Share

ಇವತ್ತು 11 ಗಂಟೆಗೆ ಶುರುವಾಗುವ ಹೋರಾಟದ ನೇತೃತ್ವವನ್ನು ಕೇಂದ್ರ ಸಚಿವ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ವಹಿಸಲಿದ್ದಾರೆ ಮತ್ತು ಪಕ್ಷದ ಅನೇಕ ಮುಖಂಡರು, ಮಾಜಿ ಮತ್ತು ಹಾಲಿ ಶಾಸಕರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ, ಸಾಕಷ್ಟು ಪ್ರಮಾಣದಲ್ಲಿ ಮಹಿಳೆಯರು ಸಹ ಪಾಲ್ಗೊಳ್ಳಲಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಬೆಂಗಳೂರು, ಏಪ್ರಿಲ್ 12: ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತ್ಯೇಕ ಹೋರಾಟ ಮಾಡುತ್ತೇವೆಂದಿದ್ದ ಜೆಡಿಎಸ್ ಮುಖಂಡರು (JDS leaders) ಇಂದಿನಿಂದ ಆರಂಭಿಸಿದ್ದಾರೆ. ಫ್ರೀಡಂ ಪಾರ್ಕ್​ನಲ್ಲಿ ಸಿದ್ಧತೆಗಳನ್ನು ವೀಕ್ಷಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರು ದಾಖಲೆಗಳನ್ನು ಹೊತ್ಯೋಯಲು ನಮ್ಮ ಕಚೇರಿಗೆ ಲಾರಿ ಕಳಿಸುವ ಬದಲು ಬೆಂಗಳೂರ ನಗರದ ತುಂಬಾ ಹರಡಿರುವ ಕಸವನ್ನು ಎತ್ತಲು ಅದನ್ನು ಬಳಸಲಿ, ಭ್ರಷ್ಟಾಚಾರದ ಅರೋಪಗಳ ದಾಖಲೆಗಳನ್ನು ಹೊತ್ತ ಒಂದು ಕ್ಯಾಂಟರ್ ಅನ್ನು ನಾವೇ ಕೆಪಿಸಿಸಿ ಕಚೇರಿಗೆ ಕಳಿಸ್ತೀವಿ, ನಮ್ಮ ಹೋರಾಟದ ಸುದ್ದಿ ಕಿವಿಗೆ ಬೀಳುತ್ತಿದ್ದಂತೆಯೇ ಕಾಂಗ್ರೆಸ್ ಶಿಬಿರದಲ್ಲಿ ತಳಮಳ ಶುರುವಾಗಿದೆ ಎಂದರು.

ಇದನ್ನೂ ಓದಿ:  ಬಿಜೆಪಿ-ಜೆಡಿಎಸ್ ಅಹೋರಾತ್ರಿ ಧರಣಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ, ಭಜನೆ!

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.