ಸಿದ್ದರಾಮಯ್ಯ ಸರ್ಕಾರ ಅಶಾಂತಿ ಸೃಷ್ಟಿಸುತ್ತಿದೆ, ಹನುಮನ ತಡವಿಕೊಂಡವರಿಗೆ ಉಳಿಗಾಲವಿಲ್ಲ: ಜನಾರ್ಧನ ರೆಡ್ಡಿ

ಗ್ರಾಮದ ಪ್ರತಿಯೊಬ್ಬ ನಿವಾಸಿ ನೊಂದುಕೊಂಡಿದ್ದಾನೆ ಮತ್ತು ದುಃಖಿತನಾಗಿದ್ದಾನೆ, ಹಾಗಾಗಿ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನರೇ ಇಲ್ಲಿಗೆ ಬಂದು ಹನುಮ ಧ್ವಜ ಹಾರಿಸಿ ಗ್ರಾಮಸ್ಥರಿಗೆ ಆಗಿರುವ ನೋವನ್ನು ಉಪಶಮನ ಮಾಡಬೇಕು ಅಂತ ಹನುಮ ಹುಟ್ಟಿದ ನಾಡಿನಿಂದ ಬಂದಿರುವ ತಾನು ಆಗ್ರಹಿಸುವುದಾಗಿ ಜನಾರ್ಧನ ರೆಡ್ಡಿ ಹೇಳಿದರು.

ಸಿದ್ದರಾಮಯ್ಯ ಸರ್ಕಾರ ಅಶಾಂತಿ ಸೃಷ್ಟಿಸುತ್ತಿದೆ, ಹನುಮನ ತಡವಿಕೊಂಡವರಿಗೆ ಉಳಿಗಾಲವಿಲ್ಲ: ಜನಾರ್ಧನ ರೆಡ್ಡಿ
|

Updated on: Jan 29, 2024 | 1:55 PM

ಮಂಡ್ಯ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ ಗಾಲಿ ಜನಾರ್ಧನ ರೆಡ್ಡಿ (Gali Janardhan Reddy) ಇಂದು ಜಿಲ್ಲೆಯ ಕೆರಗೋಡು ಗ್ರಾಮಕ್ಕೆ ಭೇಟಿ ನೀಡಿ ಹನುಮ ದ್ವಜ (Hanuma flag) ತೆರವುಗೊಳಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಅಲ್ಲಿನ ನಿವಾಸಿಗಳ ದೂರು ದುಮ್ಮಾನಗಳನ್ನು ಆಲಿಸಿದರು. ಮಂಡ್ಯದ ಟಿವಿ9 ವರದಿಗಾರನೊಂದಿಗೆ ಮಾತಾಡಿದ ಅವರು, ಗ್ರಾಮದ ಎಲ್ಲ ಧರ್ಮ, ಜಾತಿ ಮತ್ತು ವರ್ಗಗಳ ಜನ ಸೇರಿ ಇಲ್ಲಿ ಧ್ವಜಸ್ತಂಭ (flag post) ನಿರ್ಮಿಸಿದ್ದಾರೆ ಮತ್ತು ಕಳೆದ 30-40 ವರ್ಷಗಳಿಂದ ಅವರೆಲ್ಲ ಒಂದಾಗಿ ಹನುಮ ಧ್ಜಜವನ್ನು ಹಾರಿಸುತ್ತಾ ಬಂದಿದ್ದಾರೆ, ಜನರ ನಡುವೆ ಯಾವ ಸಮಸ್ಯೆಯೂ ಇರಲಿಲ್ಲ. ಅದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೆರಗೋಡುನಲ್ಲಿ ಅಶಾಂತಿ ಉಂಟಾಗುವ ಸನ್ನಿವೇಶ ಸೃಷ್ಟಿಸಿದೆ ಎಂದು ಹೇಳಿದರು.

ನಡೆದ ಘಟನೆಯಿಂದ ಗ್ರಾಮದ ಪ್ರತಿಯೊಬ್ಬ ನಿವಾಸಿ ನೊಂದುಕೊಂಡಿದ್ದಾನೆ ಮತ್ತು ದುಃಖಿತನಾಗಿದ್ದಾನೆ, ಹಾಗಾಗಿ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನರೇ ಇಲ್ಲಿಗೆ ಬಂದು ಹನುಮ ಧ್ವಜ ಹಾರಿಸಿ ಗ್ರಾಮಸ್ಥರಿಗೆ ಆಗಿರುವ ನೋವನ್ನು ಉಪಶಮನ ಮಾಡಬೇಕು ಅಂತ ಹನುಮ ಹುಟ್ಟಿದ ನಾಡಿನಿಂದ ಬಂದಿರುವ ತಾನು ಆಗ್ರಹಿಸುವುದಾಗಿ ಜನಾರ್ಧನ ರೆಡ್ಡಿ ಹೇಳಿದರು. ಹನುಮನನ್ನು ಎದುರು ಹಾಕಿಕೊಂಡವರಿಗೆ ಉಳಿಗಾಲವಿಲ್ಲ, ಅತನ ಬಾಲಕ್ಕೆ ಬೆಂಕಿ ಹಚ್ಚಿದ ರಾವಣನ ಲಂಕೆಯೇ ಸುಟ್ಟು ಭಸ್ಮವಾಯಿತು, ಸಿದ್ದರಾಮಯ್ಯ ಸರ್ಕಾರ ತಾನು ಮಾಡಿರುವ ಪಾಪಕ್ಕೆ ಪ್ರಾಯಶ್ಚಿತ ಮಾಡಿಕೊಳ್ಳಬೇಕು ಎಂದು ರೆಡ್ಡಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು