AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Loan waiver: ಸ್ತ್ರೀ ಶಕ್ತಿ ಸಂಘಗಳಲ್ಲಿ ತೆಗೆದುಕೊಂಡ ಸಾಲವನ್ನು ಮರುಪಾವತಿ ಮಾಡದ ಸುಸ್ತಿದಾರರ ಸಾಲ ಮನ್ನಾ ಆಗಲ್ಲ ಅಂತ ಸಿದ್ದರಾಮಯ್ಯ ಹೇಳಿದ್ದರು!

Loan waiver: ಸ್ತ್ರೀ ಶಕ್ತಿ ಸಂಘಗಳಲ್ಲಿ ತೆಗೆದುಕೊಂಡ ಸಾಲವನ್ನು ಮರುಪಾವತಿ ಮಾಡದ ಸುಸ್ತಿದಾರರ ಸಾಲ ಮನ್ನಾ ಆಗಲ್ಲ ಅಂತ ಸಿದ್ದರಾಮಯ್ಯ ಹೇಳಿದ್ದರು!

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 08, 2023 | 10:58 AM

ಸಿದ್ದರಾಮಯ್ಯ ಹೇಳಿದ್ದನ್ನು ಮಹಿಳೆಯರು ಸರಿಯಾಗಿ ಅರ್ಥಮಾಡಿಕೊಂಡಿಲ್ಲ ಅನ್ನೋದು ಅವರು ಮಾಡುತ್ತಿರುವ ವಾದದ ಮೂಲಕ ಗೊತ್ತಾಗುತ್ತದೆ.

ಬೆಂಗಳೂರು: ಮೊದಲು ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಅಡಿ ಮನೆಯ ಯಜಮಾನಿಗೆ ಸರ್ಕಾರ ನೀಡಲಿರುವ ಮಾಸಿಕ ರೂ. 2,000 ಸಹಾಯ ಧನ ಅತ್ತೆಗಾ ಸೊಸೆಗಾ ಅಂತ ವಿವಾದ ಶುರುವಾಯಿತು. ಕಾಂಗ್ರೆಸ್ ಪಕ್ಷ (Congress Party) ಅಧಿಕಾರಕ್ಕೆ ಬರುವ ಮೊದಲು ಅಂದರೆ ಚುನಾವಣೆಯ ಸಂದರ್ಭದಲ್ಲಿ ಸ್ವಸಹಾಯ ಸ್ತ್ರೀ ಶಕ್ತಿ ಸಂಘಗಳಲ್ಲಿ ಮಹಿಳೆಯರು ಪಡೆದ ಸಾಲವನ್ನು ಮನ್ನಾ ಮಾಡುವ ಬಗ್ಗೆ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ (Siddaramaiah) ಹೇಳಿದ್ದರ ಬಗ್ಗೆ ಈಗ ತಗಾದೆ ಆರಂಭಗೊಂಡಿದೆ. ಸಿದ್ದರಾಮಯ್ಯ ಹೇಳಿದ್ದನ್ನು ಮಹಿಳೆಯರು ಸರಿಯಾಗಿ ಅರ್ಥಮಾಡಿಕೊಂಡಿಲ್ಲ ಅನ್ನೋದು ಅವರು ಮಾಡುತ್ತಿರುವ ವಾದದ ಮೂಲಕ ಗೊತ್ತಾಗುತ್ತದೆ. ತೆಗೆದುಕೊಂಡ ಸಾಲವನ್ನು ಯಾರೆಲ್ಲ ನಿಗದಿತವಾಗಿ ಮರುಪಾವತಿ ಮಾಡುತ್ತಾ ಬಂದಿದ್ದಾರೋ ಅವರ ಸಾಲವನ್ನು ಮನ್ನಾ ಮಾಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಮಾರುಪಾವತಿ ಮಾಡದೆ ಸುಸ್ತಿದಾರರ ಪಟ್ಟಿಗೆ ಸೇರಿದವರ ಸಾಲ ಮನ್ನಾ ಆಗುವುದಿಲ್ಲ. ಸಿದ್ದರಾಮಯ್ಯ ಮಾತು ಕೇಳಿಸಿಕೊಳ್ಳಿ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ