ಸಿದ್ದರಾಮಯ್ಯರಿಂದ ಮೆಚ್ಚುಗೆ ಪಡೆಯುವಷ್ಟು ಚೆನ್ನಾಗಿ ಚಾಮುಂಡೇಶ್ವರಿಯಲ್ಲಿ ಕೆಲಸ ಮಾಡಿದ್ದೇನೆ: ಜಿಟಿ ದೇವೇಗೌಡ

ಅರುಣ್​ ಕುಮಾರ್​ ಬೆಳ್ಳಿ

Updated on: Nov 28, 2024 | 12:54 PM

ತನ್ನ 15ನೇ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ಬಳಿಕ ಇಲ್ಲಿಯವರೆಗೆ ಸುಮಾರು 54 ವರ್ಷಗಳ ಕಾಲ ಸಾರ್ವಜನಿಕ ಬದುಕಿನಲ್ಲಿ ತೊಡಗಿಸಿಕೊಂಡಿದ್ದರೂ ತನ್ನ ಮತ್ತು 15 ವರ್ಷಗಳಿಂದ ಜನಸೇವೆ ಮಾಡುತ್ತಿರುವ ತನ್ನ ಮಗ ಹಾಗೂ ಶಾಸಕ ಹರೀಶ್ ಗೌಡನ ವಿರುದ್ಧ ಒಂದೇ ಒಂದು ದೂರು ದಾಖಲಾಗಿಲ್ಲ ಎಂದು ದೇವೇಗೌಡ ಹೇಳಿದ್ದು ರೇವಣ್ಣರನ್ನು ಮೂದಲಿಸುವಂತಿತ್ತು. 

ಮೈಸೂರು: ತಮ್ಮ ವಿರುದ್ಧ ಹೆಚ್ ಡಿ ರೇವಣ್ಣ ಮಾಡಿರುವ ಟೀಕೆಗಳಿಂದ ಜೆಡಿಎಸ್ ಹಿರಿಯ ನಾಯಕ ಮತ್ತು ಶಾಸಕ ಜಿಟಿ ದೇವೇಗೌಡ ನೊಂದುಕೊಂಡಿದ್ದಾರೆ. ಇವತ್ತು ನಗರದಲ್ಲಿ ಮಾಧ್ಯಮ ಗೋಷ್ಠಿ ನಡೆಸಿ ಮಾತಾಡಿದ ಅವರು, ಸಾಮಾನ್ಯವಾಗಿ ತಾನು ಮಾಧ್ಯಮಗಳಿಂದ ದೂರವಿರುತ್ತೇನೆ ಮತ್ತು ತನ್ನ ಗಮನವೆಲ್ಲ ಚಾಮುಂಡೇಶ್ವರಿ ಕ್ಷೇತ್ರದ ಅಬಿವೃದ್ಧಿ ಮೇಲೆ ನೆಟ್ಟಿರುತ್ತದೆ, ಜನರ ಸಮಸ್ಯೆಗಳನ್ನು ಅಲಿಸಿ ಪರಿಹಾರಗಳನ್ನು ಒದಗಿಸುವುದು ತನಗೆ ಇಷ್ಟವಾಗುವ ಕೆಲಸವಾಗಿದೆ ಎಂದು ಹೇಳಿ, ತಾನು ಕ್ಷೇತ್ರದಲ್ಲಿ ಮಾಡಿರುವ ಕೆಲಸಗಳು ಮುಖ್ಯಮಂತ್ರಿ ಸಿದ್ದರಾಮಯ್ಯರಿಂದಲೂ ಮೆಚ್ಚುಗೆಗೆ ಪಾತ್ರವಾಗಿವೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಕಾಂಗ್ರೆಸ್ ಸೇರ್ಪಡೆ ಚರ್ಚೆ​ ಬಗ್ಗೆ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಹೇಳಿದ್ದಿಷ್ಟು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.