Assembly Polls: ಬಾದಾಮಿಯಲ್ಲಿ ಸಿದ್ದರಾಮಯ್ಯ ಭರ್ಜರಿ ರೋಡ್ ಶೋ, ಉರಿಬಿಸಿಲಲ್ಲೂ ಸಹಸ್ರಾರು ಜನ ಕೇಕೆ ಹಾಕುತ್ತಾ ಕುಣಿದಿದ್ದೇ ಕುಣಿದಿದ್ದು!

ಅರುಣ್​ ಕುಮಾರ್​ ಬೆಳ್ಳಿ

Updated on: Mar 24, 2023 | 5:05 PM

ಜನ ಕೇಕೆ, ಶಿಳ್ಳೆ ಹಾಕುತ್ತಾ, ಕುಣಿಯತ್ತಿದ್ದರೆ, ಸಿದ್ದರಾಮಯ್ಯನವರ ವಾಹನಕ್ಕೆ ಹತ್ತಿರದಲ್ಲಿದ್ದ ಜನ ಅವರ ಮೇಲೆ ಹೂಗಳನ್ನು ಎರಚುತ್ತಿದ್ದರು

ಬಾಗಲಕೋಟೆ: ಅತ್ತ ದೆಹಲಿಯಲ್ಲಿ ರಾಹುಲ್ ಗಾಂಧಿ (Rahul Gandhi) ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದರೆ, ಇತ್ತ ಜಿಲೆಯ ಬಾದಾಮಿಯಲ್ಲಿ ಸಿದ್ದರಾಮಯ್ಯ (Siddaramaiah) ಭರ್ಜರಿ ರೋಡ್ ಶೋ (roadshow) ನಡೆಸಿದರು. ರಸ್ತೆಯುದ್ದಕ್ಕೂ ಸಾವಿರಾರು ಅಭಿಮಾನಿಗಳು, ಕಾರ್ಯಕರ್ತರು ರೋಡ್ ಶೋ ನಲ್ಲಿ ಪಾಲ್ಗೊಂಡರು.  ಜನ ಕೇಕೆ, ಶಿಳ್ಳೆ ಹಾಕುತ್ತಾ, ಕುಣಿಯತ್ತಿದ್ದರೆ, ಸಿದ್ದರಾಮಯ್ಯನವರ ವಾಹನಕ್ಕೆ ಹತ್ತಿರದಲ್ಲಿದ್ದ ಜನ ಅವರ ಮೇಲೆ ಹೂಗಳನ್ನು ಎರಚುತ್ತಿದ್ದರು. ಮನೆ, ಕಟ್ಟಡ-ಕಚೇರಿಗಳ ಮೇಲೆ ಸಹ ಜನ ನಿಂತಿದ್ದನ್ನು ವಿಡಿಯೋದಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 24, 2023 05:04 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.