Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ್ತು ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಪರ ಮತ ಯಾಚಿಸಿದ ಸಿದ್ದರಾಮಯ್ಯ

ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮತ್ತು ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಪರ ಮತ ಯಾಚಿಸಿದ ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 27, 2024 | 11:15 AM

ಮೇ 7 ರಂದು ಮತದಾನ ನಡೆಯುವ ಕ್ಷೇತ್ರಗಳಲ್ಲಿ ಶಿವಮೊಗ್ಗವೊಂದನ್ನು ಹೊರತುಪಡಿಸಿ ಉಳಿದವೆಲ್ಲ ಉತ್ತರ ಕರ್ನಾಟಕದ ಭಾಗವಾಗಿರುವುದರಿಂದ, ಪ್ರಖರ ಬಿಸಲಲ್ಲಿ ಪ್ರಚಾರಕ್ಕೆ ತೆರಳಿರುವ ನಾಯಕರು ಬಸವಳಿಯುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿನ್ನೆ ತಮ್ಮ ಹುಟ್ಟೂರಿನಲ್ಲಿ ಮತ ಚಲಾಯಿಸಿದ ಬಳಿಕ ವಿಜಯಪುರ, ಕಲಬುರಗಿ ಮತ್ತು ಬೀದರ್ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗಾಗಿ ಪ್ರಚಾರ ನಡೆಸಿದರು.

ಬೀದರ್: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ (Lok Sabha polls) ಎರಡನೇ ಹಂತದ ಮತದಾನಕ್ಕೆ ಎರಡು ವಾರಗಳಿಗಿಂತ ಕಡಿಮೆ ಅವಧಿ ಉಳಿದಿರುವುದರಿಂದ ಎಲ್ಲ ಪಕ್ಷಗಳ ನಾಯಕರು ಮತದಾನ ನಡೆಯಬೇಕರುವ 14 ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ (aggressive campaigning) ನಡೆಸಿದ್ದಾರೆ. ಮೇ 7 ರಂದು ಮತದಾನ ನಡೆಯುವ ಕ್ಷೇತ್ರಗಳಲ್ಲಿ ಶಿವಮೊಗ್ಗವೊಂದನ್ನು ಹೊರತುಪಡಿಸಿ ಉಳಿದವೆಲ್ಲ ಉತ್ತರ ಕರ್ನಾಟಕದ ಭಾಗವಾಗಿರುವುದರಿಂದ, ಪ್ರಖರ ಬಿಸಲಲ್ಲಿ ಪ್ರಚಾರಕ್ಕೆ ತೆರಳಿರುವ ನಾಯಕರು ಬಸವಳಿಯುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ (CM Siddaramaiah) ನಿನ್ನೆ ತಮ್ಮ ಹುಟ್ಟೂರಿನಲ್ಲಿ ಮತ ಚಲಾಯಿಸಿದ ಬಳಿಕ ವಿಜಯಪುರ, ಕಲಬುರಗಿ ಮತ್ತು ಬೀದರ್ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗಾಗಿ ಪ್ರಚಾರ ನಡೆಸಿದರು. ಗಮನಿಸಬೇಕಾದ ಸಂಗತಿಯೆಂದರೆ, ಸಿದ್ದರಾಮಯ್ಯ ಉತ್ತರ ಕರ್ನಾಟಕದಲ್ಲೂ ಸಾಕಷ್ಟು ಜನಪ್ರಿಯರು ಮತ್ತು ಅವರು ಹೋದಡೆಯೆಲ್ಲ ಜನ ಸೇರುತ್ತಾರೆ. ಅವರನ್ನು ಒಬ್ಬ ಮಾಸ್ ಲೀಡರ್ ಎಂದು ವಿರೋಧ ಪಕ್ಷಗಳ ನಾಯಕರೂ ಗುರುತಿಸುತ್ತಾರೆ. ಬೀದರ್ ನಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿ ಮತ್ತು ಸಚಿವ ಈಶ್ವರ್ ಖಂಡ್ರೆ ಅವರ ಮಗ ಸಾಗರ್ ಖಂಡ್ರೆ ಅವರ ಪರವಾಗಿ ಮತ ಯಾಚಿಸಲು ಪೋಡಿಯಂ ಬಳಿ ಬಂದಾಗ ವೇದಿಕೆಯ ಮೇಲಿದ್ದ ನಾಯಕರೆಲ್ಲ ಎದ್ದುನಿಲ್ಲುವುದನ್ನು ದೃಶ್ಯಗಳಲ್ಲಿ ನೋಡಬಹುದು. ಅದರೆ ಸಿದ್ದರಾಮಯ್ಯ ಎಲ್ಲರನ್ನು ಕೂರುವಂತೆ ಹೇಳಿ ತಮ್ಮ ಮಾತು ಆರಂಭಿಸುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಲೋಕಸಭಾ ಚುನಾವಣೆ 2024: ಕಲ್ಯಾಟ ಮಂಟಪದಿಂದ ನೇರವಾಗಿ ಬಂದು ಮತ ಚಲಾಯಿಸಿದ ನವದಂಪತಿಗಳು; ಇಲ್ಲಿವೆ ಫೋಟೋಸ್​