ಗೃಹ ಜ್ಯೋತಿ ಯೋಜನೆಗೆ ಚಾಲನೆ, ವೇದಿಕೆ ಮೇಲೆ ಫಲಾನುಭವಿ ಮಹಿಳೆಯೊಬ್ಬರಿಗೆ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಬಗ್ಗೆ ವಿಚಾರಿಸಿದ ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Aug 05, 2023 | 4:02 PM

ಯೋಜನೆಗೆ ಚಾಲನೆ ನೀಡಿದ ಬಳಿಕ, ಜಿಲ್ಲೆಯ ಬೇರೆ ಬೇರೆ ಊರುಗಳ ಹತ್ತು ಫಲಾನುಭವಿಗಳಿಗೆ ಸಾಂಕೇತಿಕವಾಗಿ ಶೂನ್ಯ ವಿದ್ಯುತ್​ ಬಿಲ್​ಗಳನ್ನು ವೇದಿಕೆ ಮೇಲೆ ನೀಡಲಾಯಿತು.

ಕಲಬುರಗಿ: ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಜ್ಯೋತಿ ಯೋಜನೆಗೆ ಇಂದು ಕಲಬುರಗಿಯಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCM DK Shivakumar) ಜೊತೆ ಹಲವಾರು ಸಚಿವರು ಮತ್ತು ಶಾಸಕರು ಭಾಗವಹಿಸಿದ್ದರು. ಯೋಜನೆಗೆ ಚಾಲನೆ ನೀಡಿದ ಬಳಿಕ, ಜಿಲ್ಲೆಯ ಬೇರೆ ಬೇರೆ ಊರುಗಳ ಹತ್ತು ಫಲಾನುಭವಿಗಳಿಗೆ (beneficiaries) ಸಾಂಕೇತಿಕವಾಗಿ ಶೂನ್ಯ ವಿದ್ಯುತ್​ ಬಿಲ್​ಗಳನ್ನು ವೇದಿಕೆ ಮೇಲೆ ನೀಡಲಾಯಿತು. ಆ ಸಂದರ್ಭದಲ್ಲಿ ಒಬ್ಬ ಮಹಿಳಾ ಫಲಾನುಭವಿಯೊಂದಿಗೆ ಮಾತಾಡಿದ ಮುಖ್ಯಮಂತ್ರಿ, ಗೃಹ ಲಕ್ಷ್ಮಿ ಯೋಜನೆಗೆ ಹೆಸರು ನೋಂದಣಿ ಮಾಡಿಸಿಕೊಂಡಿದ್ದಾರೋ ಇಲ್ಲವೋ ಅಂತ ವಿಚಾರಿಸಿದರು. ಕಲಬುರಗಿಯ ನೂತನ ವಿದ್ಯಾಲಯ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.