ಬೇರೆ ಶಾಸಕರ ಕ್ಷೇತ್ರಗಳಲ್ಲೂ ಸಿಎಂ ಸಿದ್ದರಾಮಯ್ಯ ಸ್ಥಳೀಯ ನಾಯಕರಿಗಿಂತ ಹೆಚ್ಚು ಜನಪ್ರಿಯ

ಅರುಣ್​ ಕುಮಾರ್​ ಬೆಳ್ಳಿ

Updated on: Nov 13, 2024 | 6:12 PM

ಸಿದ್ದರಾಮಯ್ಯ ಮತ್ತು ಮಹಾದೇವಪ್ಪ ತಮ್ಮ ಮಕ್ಕಳನ್ನು ರಾಜಕಾರಣಕ್ಕೆ ತಂದು ಶಾಸಕ ಮತ್ತು ಸಂಸದ ಮಾಡಿಸುವಲ್ಲಿ ಯಶ ಕಂಡಿದ್ದಾರೆ. ಮೈಸೂರಲ್ಲಿ ಮುಖ್ಯಮಂತ್ರಿ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾದರೂ ಯತೀಂದ್ರ ಸಿದ್ದರಾಮಯ್ಯ ನೆರಳಿನಂತೆ ಹಿಂಬಾಲಿಸುತ್ತಾರೆ. ಇತ್ತೀಚಿಗೆ ಸುನೀಲ್ ಬೋಸ್ ಸಹ ಸಿಎಂ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ.

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವೇದಿಕೆ ಬಂದರೆ ಜನರ ಕೇಕೆ, ಶಿಳ್ಳೆ ಮತ್ತು ಚಪ್ಪಾಳೆ ಕಿವಿಗಡಚಿಕ್ಕಿಸುತ್ತವೆ. ಇವತ್ತು ಜಿಲ್ಲೆಯ ಟಿ ನರಸೀಪುರ ಹೊರಳಹಳ್ಳಿ ಗ್ರಾಮದಲ್ಲಿ ಅವರು ಸುಮಾರು ₹ 470ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿದಾಗ ಸನ್ನಿವೇಶ ಬೇರೆಯೇನೂ ಆಗಿರಲಿಲ್ಲ. ಟಿ ನರಸೀಪುರ ಶಾಸಕ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್ ಸಿ ಮಹಾದೇವಪ್ಪ ಮತ್ತು ಅವರ ಮಗ ಹಾಗೂ ಚಾಮರಾಜಪೇಟೆಯ ಸಂಸದ ಸುನೀಲ್ ಬೋಸ್ ಸ್ಥಳೀಯರಾದರೂ ಸಿದ್ದರಾಮಯ್ಯ ಹೆಚ್ಚು ಚಪ್ಪಾಳೆ ಗಿಟ್ಟಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ನಿಮ್ಮ ಪತ್ನಿಗೆ ಈಡಿ ನೋಟೀಸ್ ಜಾರಿಮಾಡಿದೆಯಾ ಅಂದಾಗ ಸಿಎಂ ಸಿದ್ದರಾಮಯ್ಯಗೆ ಕೋಪವುಕ್ಕಿತು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.