AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬದಲಾವಣೆ ಬಗ್ಗೆ ಸ್ಪಷ್ಟನೆ ಕೊಟ್ಟ ಡಿಕೆ ಶಿವಕುಮಾರ್: ಬೆಂಬಲಿಗ ಶಾಸಕರಿಗೆ ಖಡಕ್ ಎಚ್ಚರಿಕೆ ಸಂದೇಶ

ಸಿಎಂ ಬದಲಾವಣೆ ಬಗ್ಗೆ ಸ್ಪಷ್ಟನೆ ಕೊಟ್ಟ ಡಿಕೆ ಶಿವಕುಮಾರ್: ಬೆಂಬಲಿಗ ಶಾಸಕರಿಗೆ ಖಡಕ್ ಎಚ್ಚರಿಕೆ ಸಂದೇಶ

ರಮೇಶ್ ಬಿ. ಜವಳಗೇರಾ
|

Updated on: Jul 01, 2025 | 4:06 PM

Share

ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂದು ಬಹಿರಂಗವಾಗಿಯೇ ಹೇಳಿದ್ದಾರೆ. ಇದರಿಂದ ಕೆರಳಿದ ಡಿಕೆ ಶಿವಕುಮಾರ್, ರಾಜ್ಯದಲ್ಲಿ ಯಾವ ನಾಯಕತ್ವ ಕೂಡ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈಬಲಪಡಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಎರಡುವರೆ ವರ್ಷದ ಬಳಿಕ ಸಿಎಂ ಬದಲಾವಣೆ ಗೊಂದಲಗಳಿಗೆ ಸ್ವತಃ ಡಿಕೆ ಶಿವಕುಮಾರ್ ತೆರೆ ಎಳೆದರು.

ಬೆಂಗಳೂರು, (ಜುಲೈ 01): ಕಾಂಗ್ರೆಸ್ ಶಾಸಕ ಅಸಮಾಧಾನ ಹಿನ್ನೆಲೆಯಲ್ಲಿ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೆವಾಲ ಬೆಂಗಳೂರಿಗೆ ದೌಡಾಯಿಸಿದ್ದು, ಶಾಸಕ ದೂರು, ಸಮಸ್ಯೆಗಳನ್ನ ಕೇಳುತ್ತಿದ್ದಾರೆ. ಇದರ ನಡುವೆಯೇ ನಾಯಕತ್ವ ಬದಲಾವಣೆ ಕೂಗು ಎದ್ದಿದೆ. ರಾಮನಗರ ಶಾಸಕ ಇಕ್ಬಾಲ್ ಹುಸೇನ್, ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂದು ಬಹಿರಂಗವಾಗಿಯೇ ಹೇಳಿದ್ದಾರೆ. ಇದರಿಂದ ಕೆರಳಿದ ಡಿಕೆ ಶಿವಕುಮಾರ್, ರಾಜ್ಯದಲ್ಲಿ ಯಾವ ನಾಯಕತ್ವ ಕೂಡ ಬದಲಾವಣೆ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈಬಲಪಡಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಎರಡುವರೆ ವರ್ಷದ ಬಳಿಕ ಸಿಎಂ ಬದಲಾವಣೆ ಗೊಂದಲಗಳಿಗೆ ಸ್ವತಃ ಡಿಕೆ ಶಿವಕುಮಾರ್ ತೆರೆ ಎಳೆದರು.

ಅಲ್ಲದೇ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವವರೆಗೆ ಡಿಕೆಶಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇನ್ಮುಂದೆ ಯಾರೂ ಮಾಧ್ಯಮಗಳ ಮುಂದೆ ಹೋಗಬಾರದು. ಶಾಸಕ ಇಕ್ಬಾಲ್‌ ಹುಸೇನ್​ ಗೆ ನೋಟಿಸ್ ಕೊಡುತ್ತೇವೆ. ಶಾಸಕರಾದ ಬಿ.ಆರ್.ಪಾಟೀಲ್, ಬಾಲಕೃಷ್ಣ ಯಾರೇ ಆಗಿರಲಿ ಎಂದು ಬೆಂಬಲಿಗ ಶಾಸಕರಿಗೆ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.