Assembly Polls: ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡು ಅಳುತ್ತಿದ್ದ ಯಡಿಯೂರಪ್ಪರಿಗೆ ಯಾಕ್ರೀ ಕಣ್ಣೀರು ಅಂದಾಗ ಇದು ಕಣ್ಣೀರಲ್ಲ, ಪನ್ನೀರು ಎಂದರು!: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Apr 28, 2023 | 7:39 PM

ಲಿಂಗಾಯತ ನಾಯಕರನ್ನು ಬಿಜೆಪಿ  ಗೌರವಿಸುವುದಲ್ಲ ಅನ್ನೋದಿಕ್ಕೆ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಮತ್ತು ಲಕ್ಷ್ನಣ ಸವದಿ ಸಾಕ್ಷಿ ಎಂದು ಸಿದ್ದರಾಮಯ್ಯ ಹೇಳಿದರು.

ರಾಯಚೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಾಜ್ಯದ ಪ್ರಮುಖ ರಾಜಕಾರಣಿ ಅಗಿರುವುದರ ಜೊತೆಗೆ ಸದನದಲ್ಲಿ ಕನ್ನಡದ ಮೇಷ್ಟ್ರು ಆಗುತ್ತಾರೆ, ಸ್ವಗ್ರಾಮದ ಜಾತ್ರೆಯಲ್ಲಿ ಬಾಲ್ಯದ ಗೆಳೆಯರೊಂದಿಗೆ ವೀರಗಾಸೆ ಕುಣಿತ (fold dance) ಮಾಡುತ್ತಾರೆ ಅದು ಸಾಲದೆಂಬಂತೆ ಚುನಾವಣಾ ಸಭೆಗಳಲ್ಲಿ ಭಾಷಣ ಮಾಡುವಾಗ ಮಿಮಿಕ್ರಿಯನ್ನೂ (mimicry) ಮಾಡುತ್ತಾರೆ. ರಾಯಚೂರಿನ ಲಿಂಗಸೂಗೂರು ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಇಂದು ಮತ ಯಾಚಿಸುವಾಗ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪರನ್ನು ಬಿಜೆಪಿ ಸ್ಥಾನದಿಂದ ಕೆಳಗಿಳಿಸಿದಾಗ ಹೇಗೆ ಅತ್ತರು ಅನ್ನೋದನ್ನು ಮಿಮಿಕ್ ಮಾಡಿ ತೋರಿಸಿದರು. ಸಿದ್ದರಾಮಯ್ಯ ‘ಯಾಕ್ರೀ ಅಳ್ತೀರಾ?’ ಅಂತ ಕೇಳಿದಾಗ ಯಡಿಯೂರಪ್ಪ, ‘ಅಳುತ್ತಿಲ್ಲ ಇದು ಅನಂದಭಾಷ್ಪ’ ಎಂದರಂತೆ! ಲಿಂಗಾಯತ ನಾಯಕರನ್ನು ಬಿಜೆಪಿ  ಗೌರವಿಸುವುದಲ್ಲ ಅನ್ನೋದಿಕ್ಕೆ ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಮತ್ತು ಲಕ್ಷ್ನಣ ಸವದಿ ಸಾಕ್ಷಿ ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 28, 2023 06:46 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.