ಬಳ್ಳಾರಿ: ಜಿಲ್ಲೆಯ ಸಿರಗುಪ್ಪದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿಎಂ ನಾಗರಾಜ (BM Nagaraj) ಪರವಾಗಿ ಇಂದು ಪ್ರಚಾರ ಮಾಡಿದ ಸಿದ್ದರಾಮಯ್ಯ (Siddaramaiah), ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ (BS Yediyurappa) ಮಿಮಿಕ್ರಿ ಮಾಡಿ ನೆರೆದ ಜನರನ್ನು ನಗೆಗಡಲಲ್ಲಿ ಮುಳುಗಿಸಿದರು. ಮಾತಾಡುವಾಗ ಲಿಂಗಾಯತ ಸಮುದಾಯದ ವಿಷಯವನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ ಬಳ್ಳಾರಿ ಜಿಲ್ಲೆಯಲ್ಲಿ ಬಿಜೆಪಿ ಒಬ್ಬೇಒಬ್ಬ ಲಿಂಗಾಯತ ಅಬ್ಯರ್ಥಿಗೆ ಟಿಕೆಟ್ ನೀಡಿಲ್ಲ ಎಂದು ಹೇಳಿದರು. ಲಿಂಗಾಯತರಾಗಿದ್ದ ಲಕ್ಷ್ಮಣ ಸವದಿ ಮತ್ತು ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡದೆ ಪಕ್ಷದಿಂದ ಹೊರಹಾಕಿದರು ಎಂದು ಹೇಳಿದ ಸಿದ್ದರಾಮಯ್ಯ, ಲಿಂಗಾಯತರಾಗಿರುವ ಯಡಿಯೂರಪ್ಪರನ್ನು ಎರಡು ವರ್ಷ ಕಾಲ ಮುಖ್ಯಮಂತ್ರಿ ಮಾಡಿ ಆಮೇಲೆ ಕೆಳಗಿಳಿಸಿದರು. ಬಿಜೆಪಿಯೇ ಲಿಂಗಾಯತ ಸಮುದಾಯದ ನಾಯಕರನ್ನು ಅತ್ಯಂತ ಅಗೌರವದಿಂದ ಟ್ರೀಟ್ ಮಾಡಿದೆ ಎಂದು ಸಿದ್ದರಾಮಯ್ಯ ಹೇಳಿದರು
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಚುನಾವಣಾಅ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ