ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜವಾಯ್ತು!

Edited By:

Updated on: Sep 26, 2024 | 9:05 PM

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಸಿಲುಕಿರುವ ವಿಚಾರವಾಗಿ ಧಾರವಾಡದಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಸಿದ್ದರಾಮಯ್ಯಗೆ ಮುಡಾ ಸಂಕಷ್ಟದ ಬಗ್ಗೆ ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ಇದೀಗ ನಿಜವಾಗಿದೆ. ಹಾಗಿದ್ದರೆ ಕೋಡಿಶ್ರೀ ಹೇಳಿದ್ದೇನು? ವಿಡಿಯೋ ನೋಡಿ.

ಧಾರವಾಡ, ಸೆಪ್ಟೆಂಬರ್ 26: ಮುಡಾ ಸೈಟ್ ಹಗರಣ ಹೆಜ್ಜೆ ಹೆಜ್ಜೆಗೂ ಸಿದ್ದರಾಮಯ್ಯಗೆ (Siddaramaiah) ಸಂಕಷ್ಟ ತಂದೊಡ್ಡುತ್ತಿದೆ. ಪತ್ನಿ ಹೆಸರಿಗೆ ಹಂಚಿಕೆ ಆಗಿರುವ 14 ಸೈಟ್​​​ಗಳ ಅಕ್ರಮದ ಕೇಸ್​​​​, ಹತ್ತಾರು ರೀತಿಯಲ್ಲಿ ಸಿದ್ದರಾಮಯ್ಯಗೆ ಬಿಸಿ ತಟ್ಟಿದೆ. ತವರಿನಲ್ಲೇ ಸಿಎಂ ವಿರುದ್ಧ ಎಫ್​ಐಆರ್ ದಾಖಲಾಗಲು ಕೌಂಟ್​ಡೌನ್​ ಶುರುವಾಗಿದ್ದು, ರಾಜೀನಾಮೆಗಾಗಿ ಸ್ವಪಕ್ಷದಲ್ಲೂ ಆಗ್ರಹ ಕೇಳಿಬಂದಿದೆ. ಈ ಮಧ್ಯೆ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯಯನ್ನು ಕಾಂಗ್ರೆಸ್​ ಕಾರ್ಯಕರ್ತರು ಮತ್ತು ಸಿದ್ದರಾಮಯ್ಯ ಅಭಿಮಾನಿಗಳು ತಾಳೆ ಹಾಕುತ್ತಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಅಭಿಮನ್ಯುವಿನ ಬಿಲ್ಲಿನ ದಾರವನ್ನು ಮೋಸದಿಂದ ಕರ್ಣನ ಕೈಯಿಂದ ದಾರ ಕಟ್ ಮಾಡಿಸುತ್ತಾರೆ ಅಂತಾ ಹೇಳಿದ್ದೆ. ಮಹಾಭಾರತದಲ್ಲಿ ಕೃಷ್ಣನಿದ್ದ, ಭೀಮ ಗೆದ್ದ. ಇಲ್ಲಿ ಕೃಷ್ಣ ಇಲ್ಲ ದುರ್ಯೋಧನ ಗೆದ್ದ. ಅಭಿಮನ್ಯವಿನ ಹೆಂಡತಿ ರಣರಂಗ ಪ್ರವೇಶಿಸುತ್ತಾಳೆ ಎಂದಿದ್ದೆ ಈಗ ಏನಾಯ್ತು? ಬಿಲ್ಲಿನ ದಾರ ಕಟ್ ಮಾಡಿಸಿದರು. ಸಿದ್ದರಾಮಯ್ಯ ಜೀವನದಲ್ಲಿ ಎಂದಿಗೂ ಹೆಂಡತಿ ಹೊರಗೆ ಬಂದಿಲ್ಲ. ಪಾವಿತ್ರ್ಯತೆ ಇರುವ ಹೆಣ್ಣು ಮಗಳು. ಈಗ ಎಲ್ಲ ಕಡೆ ಅವರ ಹೆಸರು ಬಂತು ಎಂದಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More