AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಮುಂದುವರಿಯುತ್ತಾರೆ, ಮುಂದಿನ ಅವಧಿಗೂ ಅವರೇ ಸಿಎಂ: ಶಿವಾನಂದ ಪಾಟೀಲ್, ಸಚಿವ

ಸಿದ್ದರಾಮಯ್ಯ ಮುಂದುವರಿಯುತ್ತಾರೆ, ಮುಂದಿನ ಅವಧಿಗೂ ಅವರೇ ಸಿಎಂ: ಶಿವಾನಂದ ಪಾಟೀಲ್, ಸಚಿವ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Feb 17, 2025 | 12:06 PM

Share

ಯಾವ ನಾಯಕ, ಮಂತ್ರಿ ಅಥವಾ ಶಾಸಕ ಏನೇ ಹೇಳಿದರೂ ಅವರ ಧೋರಣೆಯಿಂದ ಒಂದು ಮಾತು ಸ್ಪಷ್ಟವಾಗುತ್ತದೆ, ಅವರಿಗೆ ಹೈಕಮಾಂಡ್ ಬಗ್ಗೆ ಕ್ಯಾರೆ ಇಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಲ್ಲರೂ ಬಾಯಿ ಮುಚ್ಚಿಕೊಂಡು ಕೆಲಸ ಮಾಡಬೇಕು, ಹೇಳಿಕೆ ನೀಡುವ ಉಸಾಬರಿಗೆ ಹೋಗಬಾರದು ಅಂತ ಹೇಳಿದರೂ ಹೇಳಿಕೆಗಳ ಪರ್ವ ಎಡೆಬಿಡದೆ ಸಾಗಿದೆ. ಒಂದಿಬ್ಬರನ್ನು ಖರ್ಗೆ ಉಚ್ಚಾಟಿಸಿದ ನಂತರವೇ ಇದು ಸರಿಹೋಗಬಹುದು.

ಬೆಳಗಾವಿ: ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಕೆಲ ಮಂತ್ರಿ ಮತ್ತು ಶಾಸಕರು ಒಂದು ವಾಡಿಕೆಯನ್ನು ರೂಢಿಸಿಕೊಂಡಿದ್ದಾರೆ ಮಾರಾಯ್ರೇ. ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಮೊದಲು ತಮ್ಮ ಅಭಿಪ್ರಾಯ ಹೇಳುತ್ತಾರೆ ನಂತರ ಅದೆಲ್ಲ ಹೈಕಮಾಂಡ್​ಗೆ ಬಿಟ್ಟ ವಿಚಾರ, ಅದು ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ ಎನ್ನುತ್ತಾರೆ! ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದ ಸಚಿವ ಶಿವಾನಂದ ಪಾಟೀಲ್ ಸಿದ್ದರಾಮಯ್ಯನವರೇ 5 ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ ಮತ್ತು ಮುಂದಿನ ಅವಧಿಗೂ ಅವರೇ ಮುಂದುವರಿಯುತ್ತಾರೆ ಎನ್ನುತ್ತಾರೆ. ನಂತರ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷ ಮತ್ತು ಹೈಕಮಾಂಡ್ ವಿಷಯವಾಗಿ ಮಾತಾಡುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಖರ್ಗೆ ಸುಳಿವು ಬೆನ್ನಲ್ಲೇ ಡಿಕೆಶಿ ಮಾರ್ಮಿಕ ಟ್ವೀಟ್!

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.