ಓಬಿಸಿ ಸಲಹಾ ಸಮಿತಿಗೆ ಸಿದ್ದರಾಮಯ್ಯ ಅಧ್ಯಕ್ಷನಾದರೂ ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತಿಲ್ಲ: ಸತೀಶ್ ಜಾರಕಿಹೊಳಿ

ಅರುಣ್​ ಕುಮಾರ್​ ಬೆಳ್ಳಿ

Updated on: Jul 26, 2025 | 5:59 PM

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ನಡೆಯುವಾಗ, ಮತಗಳ್ಳತನ ಮತ್ತು ಅಕ್ರಮ ನಡೆದ ಕಾರಣಕ್ಕೆ ಕಾಂಗ್ರೆಸ್​ಗೆ ಕಡಿಮೆ ಸ್ಥಾನ ಬಂದಿವೆ ಅಂತ ಶಿವಕುಮಾರ್ ಹೇಳಿರುವುದು ಸರಿ ಎಂದ ಜಾರಕಿಹೊಳಿ, ಮಹಾರಾಷ್ಟ್ರದ ದೊಡ್ಡ ಉದಾಹರಣೆ ನಮ್ಮ ಮುಂದಿದೆ, ಅಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಲಕ್ಷಾಂತರ ಹೊಸ ವೋಟರ್​​ಗಳನ್ನು ಸೇರಿಸಲಾಗಿದೆ ಮತ್ತು ಅನೇಕರ ಹೆಸರುಗನ್ನು ಡಿಲೀಟ್ ಮಾಡಲಾಗಿದೆ ಅಂತ ಹೇಳಿದರು.

ಬಾಗಲಕೋಟೆ, ಜುಲೈ 26: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ನಿನ್ನೆ ದೆಹಲಿಯಲ್ಲಿಯಲ್ಲಿ ನಡೆದ ಭಾಗೀದಾರ್ ನ್ಯಾಯ್ ಸಮಾವೇಶದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿದ್ದರು, ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಸೆಳೆಯುವ ಪ್ರಯತ್ನ ಎಐಸಿಸಿ ಮಾಡುವಂತೆ ಕಾಣುತ್ತಿದೆ, ಹಾಗೇನಾದರೂ ನಡೆದರೆ ಅವರ ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ಬರಲಾರದೇ ಎಂದು ಕೇಳಿದ ಪ್ರಶ್ನೆಗೆ ಸಚಿವ ಸತೀಶ್ ಜಾರಕಿಹೊಳಿ, ಕುತ್ತೇನೂ ಬರಲಾರದು, ಅದೇನಿದ್ದರೂ ಹೆಚ್ಚುವರಿ ಜವಾಬ್ದಾರಿ ಎಂದು ಹೇಳಿದರು. ರಾಷ್ಟ್ರ ರಾಜಕಾರಣದಲ್ಲಿ ತನಗೆ ಅಭಿರುಚಿ ಇಲ್ಲ ಅನ್ನೋದನ್ನ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟಪಡಿಸಿದ್ದಾರೆ, ಹಾಗಾಗಿ ಸಿಎಂ ಸ್ಥಾನ ತ್ಯಜಿಸುವಂತೆ ಹೈಕಮಾಂಡ್ ಅವರ ಮೇಲೆ ಒತ್ತಡ ಹೇರಲಾರದು ಎಂದು ಜಾರಕಿಹೊಳಿ ಹೇಳಿದರು.

ಇದನ್ನೂ ಓದಿ:  ನನ್ನ ಇಲಾಖೆಯಿಂದ ಅನುದಾನ ಬಿಡುಗಡೆಯಾಗಿಲ್ಲದಿರುವುದನ್ನು ಸುರ್ಜೇವಾಲಾ ಚರ್ಚಿಸಿದರು: ಸತೀಶ್ ಜಾರಕಿಹೊಳಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.