Assembly Polls 2023: ಹತ್ತು ಕೇಜಿ ಅಕ್ಕಿ ಫ್ರೀಯಾಗಿ ಕೊಡ್ತೀವಿ ಅಂದ್ರೆ ನಿಮ್ಗೆ ಸಂತೋಷವಾಗ್ಲಿಲ್ವಾ ಅಂತ ಹೂವಿನ ಹಡಗಲಿ ಜನರನ್ನು ಸಿದ್ದರಾಮಯ್ಯ ಕೇಳಿದರು!

ಅರುಣ್​ ಕುಮಾರ್​ ಬೆಳ್ಳಿ

Updated on: Apr 26, 2023 | 7:10 PM

ಪಕ್ಷದ ಅಭ್ಯರ್ಥಿ ಪಿಟಿ ಪರಮೇಶ್ವರ್ ನಾಯಕ್ ಅವರ ಪರ ಮತ ಯಾಚನೆ ಮಾಡುವಾಗ ಕಾಂಗ್ರೆಸ್ ನೀಡಿರುವ ಆಶ್ವಾಸನೆಗಳನ್ನು ಸಿದ್ದರಾಮಯ್ಯ ಪುನರಾವರ್ತಿಸಿದರು.

ವಿಜಯನಗರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ಜಿಲ್ಲೆಯ ಹೂವಿನ ಹಡಗಲಿಯಲ್ಲಿ (Huvina Hadagali) ಪಕ್ಷದ ಅಭ್ಯರ್ಥಿ ಪಿಟಿ ಪರಮೇಶ್ವರ್ ನಾಯಕ್ (PT Parameshwara Naik) ಅವರ ಪರ ಮತ ಯಾಚನೆ ಮಾಡುವಾಗ ಕಾಂಗ್ರೆಸ್ ನೀಡಿರುವ ಆಶ್ವಾಸನೆಗಳನ್ನು ಪುನರಾವರ್ತಿಸಿದರು. ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲ ಗೃಹಿಣಿಯರಿಗೆ ಮಾಸಿಕ ರೂ. 2,000 ಸಹಾಯ ಧನ ನೀಡುವುದಾಗಿ ಹೇಳಿದ ನಂತರ ಅವರು ಮೊದಲು ತಮ್ಮ ಸರ್ಕಾರ ಆಧಿಕಾರದಲ್ಲಿದ್ದಾಗ ಕೊಡುತ್ತಿದ್ದ 7 ಕೇಜಿ ಅಕ್ಕಿಯನ್ನು ಬಿಜೆಪಿ ಸರ್ಕಾರ 5 ಕೇಜಿಗೆ ಇಳಿಸಿತ್ತು, ಅದರೆ ಕಾಂಗ್ರೆಸ್ ಅದನ್ನು 10 ಕೇಜಿಗೆ ಹೆಚ್ಚಿಸುವುದು ಎಂದು ಹೇಳಿದರು. ಅವರ ಮಾತಿಗೆ ನಿರೀಕ್ಷಿತ ಪ್ರತಿಕ್ರಿಯೆ ಬಾರದೇ ಹೋದಾಗ ‘ಯಾಕಪ್ಪ ನಿಮಗೆ 10 ಕೇಜಿ ಅಕ್ಕಿ ಉಚಿತವಾಗಿ ನೀಡುತ್ತೇವೆ ಅಂತ ಹೇಳಿದರೆ ಸಂತೋಷವಾಗಲಿಲ್ಲವಾ?’ ಅಂತ ಕೇಳುತ್ತಾರೆ. ಜನ ಆಗ ಹೋ ಅಂತ ಕಿರುಚುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 26, 2023 07:09 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.