ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ, ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ
ರಾಜ್ಯ ರಾಜಕೀಯದ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಅಧ್ಯಾಯ ದಾಖಲಾಗಿದ್ದು, ಸಿದ್ದರಾಮಯ್ಯ ಅವರು ತಮ್ಮ ಆಪ್ತರೊಂದಿಗೆ ಇಂದು (ಮೇ 28) ಲೋಕಭವನಕ್ಕೆ (ರಾಜಭವನ) ತೆರಳಿ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದರು. ರಾಜ್ಯಪಾಲ ಥಾವತ್ ಚಂದ್ ಗೆಹ್ಲೋಟ್ ಅನುಪಸ್ಥಿತಿಯಲ್ಲಿ ರಾಜಭವನದ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ರಾಜೀನಾಮೆ ಪತ್ರವನ್ನು ನೀಡಿದ್ದು, ಇನ್ನು ಒಂದು ಪುಟದ ರಾಜೀನಾಮೆ ಪತ್ರವನ್ನು ಪ್ರಭುಶಂಕರ್ ಅವರು ಸ್ವೀಕರಿಸಿದ್ದಾರೆ.
ಬೆಂಗಳೂರು, (ಮೇ 28): ರಾಜ್ಯ ರಾಜಕೀಯದ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಅಧ್ಯಾಯ ದಾಖಲಾಗಿದ್ದು, ಸಿದ್ದರಾಮಯ್ಯ (Siddaramaiah) ಅವರು ತಮ್ಮ ಆಪ್ತರೊಂದಿಗೆ ಇಂದು (ಮೇ 28) ಲೋಕಭವನಕ್ಕೆ (ರಾಜಭವನ) ತೆರಳಿ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದರು. ರಾಜ್ಯಪಾಲ ಥಾವತ್ ಚಂದ್ ಗೆಹ್ಲೋಟ್ ಅನುಪಸ್ಥಿತಿಯಲ್ಲಿ ರಾಜಭವನದ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ರಾಜೀನಾಮೆ ಪತ್ರವನ್ನು ನೀಡಿದ್ದು, ಇನ್ನು ಒಂದು ಪುಟದ ರಾಜೀನಾಮೆ ಪತ್ರವನ್ನು ಪ್ರಭುಶಂಕರ್ ಅವರು ಸ್ವೀಕರಿಸಿದ್ದಾರೆ. ಇದರೊಂದಿಗೆ ಸಿದ್ದರಾಮಯ್ಯನವರ ಮೂರು ವರ್ಷದ ಆಡಳಿತ ಅಂತ್ಯವಾಗಿದೆ.
ಈ ವೇಳೆ ಪ್ರಭುಶಂಕರ್ ಅವರು ರಾಜೀನಾಮೆ ಪತ್ರ ಸ್ವೀಕಾರ ಶಿಷ್ಟಾಚಾರದ ಬಗ್ಗೆ ಸಿದ್ದರಾಮಯ್ಯನವರಿಗೆ ಮನವರಿಕೆ ಮಾಡಿಕೊಟ್ಟರು. ನಾಳೆ (ಮೇ 29) ಸಂಜೆ ವೇಳೆಗೆ ರಾಜ್ಯಪಾಲರು ಬೆಂಗಳೂರಿಗೆ ಹಿಂದಿರುಗಲಿದ್ದಾರೆ. ಹೀಗಾಗಿ ತಾವು ಮತ್ತೊಮ್ಮೆ ಬಂದು ರಾಜ್ಯಪಾಲರನ್ನು ಭೇಟಿಯಾಗಬೇಕು ಎಂದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 28, 2026 04:01 PM
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಬಿಗ್ ಬಾಸ್: ಗಗನ್ ಚಿನ್ನಪ್ಪ ವಿರುದ್ಧ ತಿರುಗಿಬಿದ್ದ ಕಾಮನರ್ ಸ್ಪರ್ಧಿಗಳು
ಸರ್ಕಾರಕ್ಕೆ 100ರ ಸಂಭ್ರಮ :ಬಿಕೆ ಹರಿಪ್ರಸಾದ್ ಅಸಮಾಧಾನ

