ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ, ವಿಶೇಷ ಸೂಚನೆ ನೀಡಿದ ರಾಜ್ಯಪಾಲರ ಕಾರ್ಯದರ್ಶಿ

Updated on: May 28, 2026 | 4:03 PM

ರಾಜ್ಯ ರಾಜಕೀಯದ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಅಧ್ಯಾಯ ದಾಖಲಾಗಿದ್ದು, ಸಿದ್ದರಾಮಯ್ಯ ಅವರು ತಮ್ಮ ಆಪ್ತರೊಂದಿಗೆ ಇಂದು (ಮೇ 28) ಲೋಕಭವನಕ್ಕೆ (ರಾಜಭವನ) ತೆರಳಿ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದರು. ರಾಜ್ಯಪಾಲ ಥಾವತ್ ಚಂದ್ ಗೆಹ್ಲೋಟ್ ಅನುಪಸ್ಥಿತಿಯಲ್ಲಿ ರಾಜಭವನದ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ರಾಜೀನಾಮೆ ಪತ್ರವನ್ನು ನೀಡಿದ್ದು, ಇನ್ನು ಒಂದು ಪುಟದ ರಾಜೀನಾಮೆ ಪತ್ರವನ್ನು ಪ್ರಭುಶಂಕರ್ ಅವರು ಸ್ವೀಕರಿಸಿದ್ದಾರೆ.

ಬೆಂಗಳೂರು, (ಮೇ 28): ರಾಜ್ಯ ರಾಜಕೀಯದ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಅಧ್ಯಾಯ ದಾಖಲಾಗಿದ್ದು, ಸಿದ್ದರಾಮಯ್ಯ  (Siddaramaiah) ಅವರು ತಮ್ಮ ಆಪ್ತರೊಂದಿಗೆ ಇಂದು (ಮೇ 28) ಲೋಕಭವನಕ್ಕೆ (ರಾಜಭವನ) ತೆರಳಿ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದರು. ರಾಜ್ಯಪಾಲ ಥಾವತ್ ಚಂದ್ ಗೆಹ್ಲೋಟ್ ಅನುಪಸ್ಥಿತಿಯಲ್ಲಿ ರಾಜಭವನದ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ರಾಜೀನಾಮೆ ಪತ್ರವನ್ನು ನೀಡಿದ್ದು, ಇನ್ನು ಒಂದು ಪುಟದ ರಾಜೀನಾಮೆ ಪತ್ರವನ್ನು ಪ್ರಭುಶಂಕರ್ ಅವರು ಸ್ವೀಕರಿಸಿದ್ದಾರೆ. ಇದರೊಂದಿಗೆ  ಸಿದ್ದರಾಮಯ್ಯನವರ ಮೂರು ವರ್ಷದ ಆಡಳಿತ ಅಂತ್ಯವಾಗಿದೆ.

ಈ ವೇಳೆ ಪ್ರಭುಶಂಕರ್ ಅವರು ರಾಜೀನಾಮೆ ಪತ್ರ ಸ್ವೀಕಾರ ಶಿಷ್ಟಾಚಾರದ ಬಗ್ಗೆ ಸಿದ್ದರಾಮಯ್ಯನವರಿಗೆ ಮನವರಿಕೆ ಮಾಡಿಕೊಟ್ಟರು. ನಾಳೆ (ಮೇ 29) ಸಂಜೆ ವೇಳೆಗೆ ರಾಜ್ಯಪಾಲರು ಬೆಂಗಳೂರಿಗೆ ಹಿಂದಿರುಗಲಿದ್ದಾರೆ. ಹೀಗಾಗಿ ತಾವು ಮತ್ತೊಮ್ಮೆ ಬಂದು ರಾಜ್ಯಪಾಲರನ್ನು ಭೇಟಿಯಾಗಬೇಕು ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 28, 2026 04:01 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More