Siddaramaiah: ಪ್ರಜಾಧ್ವನಿ ಯಾತ್ರೆ ಪುನರಾರಂಭಿಸಿದ ಸಿದ್ದರಾಮಯ್ಯ ಹೆಲಿಕಾಪ್ಟರ್ ನಲ್ಲಿ ದಾವಣಗೆರೆಗೆ ಆಗಮನ

ಅರುಣ್​ ಕುಮಾರ್​ ಬೆಳ್ಳಿ

Updated on: Mar 13, 2023 | 3:03 PM

ಮಾಜಿ ಸಂಸದ ಆರ್ ಧ್ರುವನಾರಾಯಣ ಅವರ ಮರಣದ ಹಿನ್ನೆಲೆಯಲ್ಲಿ ಎರಡು ದಿನಗಳ ಮಟ್ಟಿಗೆ ಪ್ರಜಾಧ್ವನಿ ಯಾತ್ರೆಯನ್ನು ಮೊಟಕುಗೊಳಿಸಿದ್ದ ಸಿದ್ದರಾಮಯ್ಯ ಇಂದು ಅದನ್ನು ಪುನರಾರಂಭಿಸಿದರು.

ದಾವಣಗೆರೆ: ಕಾಂಗ್ರೆಸ್ ಧುರೀಣ ಮತ್ತು ಮಾಜಿ ಸಂಸದ ಆರ್ ಧ್ರುವನಾರಾಯಣ (R Dhruvanarayana) ಅವರ ಮರಣದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ನಡೆಯುತ್ತಿದ್ದ ಪ್ರಜಾಧ್ವನಿ ಯಾತ್ರೆಯನ್ನು (Prajadhvani Yatre) ಮೊಟಕುಗೊಳಿಸಿ ಮೈಸೂರಿಗೆ ತೆರಳಿದ್ದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ (Siddaramaiah) ಇಂದು ಯಾತ್ರೆ ಮುಂದುವರಿಸಲು ದಾವಣಗೆರೆಗೆ ಆಗಮಿಸಿದರು. ಹೆಲಿಕಾಪ್ಟರ್ ಒಂದರಲ್ಲಿ ಅವರ ಜಿಲ್ಲೆಯ ಹೊನ್ನಾಳಿಗೆ ಆಗಮಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಎಂದಿನಂತೆ ಹೆಲಿಪ್ಯಾಡ್ ಬಳಿ ಸಿದ್ದರಾಮಯ್ಯರನ್ನು ಕಾರ್ಯಕರ್ತರು ಮತ್ತು ಮಾಧ್ಯಮ ಪ್ರತಿನಿಧಿಗಳು ಸುತ್ತುವರೆದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.