ಕೇವಲ ಡಿನ್ನರ್ಗಾಗಿ ಸಿಎಂ ಸಿದ್ದರಾಮಯ್ಯ ನಿನ್ನೆ ರಾತ್ರಿ ಗೃಹ ಸಚಿವ ಪರಮೇಶ್ವರ್ ನಿವಾಸಕ್ಕೆ ಬಂದಿದ್ದರೆ?
ಮತ್ತೊಂದು ಸಂಗತಿಯೆಂದರೆ, ಸತೀಶ್, ಕೆಲ ‘ಸಮಾನಮನಸ್ಕ’ ಶಾಸಕರೊಂದಿಗೆ ದುಬೈ ಪ್ರವಾಸ ಹೋಗಲಿದ್ದಾರಂತೆ. ಈ ಸಂಗತಿ ಬಗ್ಗೆ ನಿನ್ನೆ ಪರಮೇಶ್ವರ್, ತಮ್ಮ ದುಡ್ಡಿನಲ್ಲಿ ಶಾಪಿಂಗ್ ಗಾಗಿ ಹೋಗುತ್ತಿರುವವರನ್ನು ಬೇಡ ಅಂತ ತಡೆಯಲಾಗುತ್ತಾ ಅಂದಿದ್ದರು. ಇದೆಲ್ಲದರ ನಡುವೆ ನಿನ್ನೆ ರಾತ್ರಿ ಸಿದ್ದರಾಮಯ್ಯ, ಸತೀಶ್ ಮತ್ತು ಹೆಚ್ ಸಿ ಮಹದದೇವಪ್ಪ; ಪರಮೇಶ್ವರ್ ಮನೆಯಲ್ಲಿ ಊಟಕ್ಕೆ ಸೇರಿದ್ದಾರೆ!
ಬೆಂಗಳೂರು: ಏನೋ ನಡೀತಾ ಇದೆ ಮಾರಾಯ್ರೇ, ಅದರೆ ರಾಜ್ಯ ಕಾಂಗ್ರೆಸ್ ನ ಪ್ರಮುಖರ್ಯಾರೂ ಸುಳಿವು ನೀಡುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನಿನ್ನೆ ರಾತ್ರಿ ದಿಢೀರನೆ ಗೃಹಸಚಿವ ಜಿ ಪರಮೇಶ್ವರ್ (G Parameshwar) ಮನೆಗೆ ಬಂದಿದ್ದರು. ಸಿಎಂ ಭೇಟಿಯಲ್ಲಿ ವಿಶೇಷತೆಯೇನೂ ಇಲ್ಲ ಊಟಕ್ಕೆ ಸೇರಿದ್ದು ಅಂತ ಪರಮೇಶ್ವರ್ ಹೇಳುತ್ತಾರೆ. ಪರಮೇಶ್ವರ್ ಮನೇಲಿ ಸತೀಶ್ ಜಾರಕಿಹೊಳಿ (Satish Jarkiholi) ಇಲ್ಲದೆ ಹೋಗಿದ್ದರೆ, ಪರಮೇಶ್ವರ್ ಹೇಳಿದ್ದಕ್ಕೆ ‘ಹೌದಾ ಸರ್?’ ಅನ್ಕೊಂಡು ಸುಮ್ಮನಾಗಬಹುದಿತ್ತು. ನಿಮಗೆ ಗೊತ್ತಿದೆ, ಸತೀಶ್ ಪ್ರಾಯಶಃ ಡಿಕೆ ಶಿವಕುಮಾರ್ ವಿಷಯದಲ್ಲಿ ಅಸಮಾಧಾನ ಹೊಂದಿರುವಂತಿದೆ. ಕೆಲ ದಿನಗಳ ಹಿಂದೆ ಶಿವಕುಮಾರ್ ಬೆಳಗಾವಿಗೆ ಭೇಟಿ ನೀಡಿದಾಗ ಸತೀಶ್ ಮೈಸೂರಲ್ಲಿದ್ದರು. ಅದು ಉದ್ದೇಶಪೂರ್ವಕ ನಡೆ ಅಂತ ಕಾಂಗ್ರೆಸ್ ನಾಯಕರಿಗೆ ಚೆನ್ನಾಗಿ ಗೊತ್ತು. ಮತ್ತೊಂದು ಸಂಗತಿಯೆಂದರೆ, ಸತೀಶ್, ಕೆಲ ‘ಸಮಾನಮನಸ್ಕ’ ಶಾಸಕರೊಂದಿಗೆ ದುಬೈ ಪ್ರವಾಸ ಹೋಗಲಿದ್ದಾರಂತೆ. ಈ ಸಂಗತಿ ಬಗ್ಗೆ ನಿನ್ನೆ ಪರಮೇಶ್ವರ್, ತಮ್ಮ ದುಡ್ಡಿನಲ್ಲಿ ಶಾಪಿಂಗ್ ಗಾಗಿ ಹೋಗುತ್ತಿರುವವರನ್ನು ಬೇಡ ಅಂತ ತಡೆಯಲಾಗುತ್ತಾ ಅಂದಿದ್ದರು. ಇದೆಲ್ಲದರ ನಡುವೆ ನಿನ್ನೆ ರಾತ್ರಿ ಸಿದ್ದರಾಮಯ್ಯ, ಸತೀಶ್ ಮತ್ತು ಹೆಚ್ ಸಿ ಮಹದದೇವಪ್ಪ; ಪರಮೇಶ್ವರ್ ಮನೆಯಲ್ಲಿ ಊಟಕ್ಕೆ ಸೇರಿದ್ದಾರೆ! ಇದನ್ನೆಲ್ಲ ನೋಡುತ್ತಿದ್ದರೆ ಸಂಥಿಂಗ್ ಫಿಶಿ ಅನಿಸದಿರದು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್ಆರ್ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್ಗಾಗಿ ರಿಪ್ಪನ್ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!

