ಸಚಿವರೊಂದಿಗೆ ಉಪಹಾರ ಸಭೆಯಲ್ಲಿ ಸಿಎಂ ಭಾವುಕ: ಕಣ್ಣೀರು ಹಾಕಿದ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರೊಂದಿಗೆ ನಡೆದ ಉಪಹಾರ ಸಭೆಯಲ್ಲಿ ಕಣ್ಣೀರಿಟ್ಟಿದ್ದಾರೆ. ರಾಜೀನಾಮೆ ನಿರ್ಧಾರ ಮತ್ತು ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರ ಹೆಸರನ್ನು ಪ್ರಕಟಿಸುವ ಸಂದರ್ಭದಲ್ಲಿ ಸಿದ್ದರಾಮಯ್ಯ ಭಾವುಕರಾಗಿದ್ದಾರೆ. ತಮ್ಮ ಉತ್ತಮ ಆಡಳಿತ ಮತ್ತು ಜನಪರ ಯೋಜನೆಗಳ ಬಗ್ಗೆ ತಿಳಿಸಿ, ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೊತೆ ಸಹಕರಿಸುವಂತೆ ಸಚಿವರಿಗೆ ಕರೆ ನೀಡಿದ್ದಾರೆ.
ಬೆಂಗಳೂರು, ಮೇ 28: ಸಚಿವರೊಂದಿಗಿನ ಉಪಹಾರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಕಣ್ಣೀರಿಟ್ಟಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮತ್ತು ಮುಂದಿನ ಎರಡು ವರ್ಷಗಳ ಕಾಲ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಪ್ರಕಟಿಸುವ ವೇಳೆ ಸಿದ್ದರಾಮಯ್ಯ ಭಾವುಕರಾದ ಪ್ರಸಂಗ ನಡೆದಿದೆ. ಈ ಸಂದರ್ಭ ಸಿದ್ದರಾಮಯ್ಯ ಅವರು ತಮ್ಮ ಆಡಳಿತಾವಧಿಯಲ್ಲಿ ನೀಡಿದ ಜನಪರ ಯೋಜನೆಗಳು ಮತ್ತು ಉತ್ತಮ ಕಾರ್ಯಗಳನ್ನು ಸ್ಮರಿಸಿದ್ದು, ಮುಂಬರುವ ದಿನಗಳಲ್ಲಿ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಂಪೂರ್ಣ ಸಹಕಾರ ನೀಡಿ. ಜನಪರ ಆಡಳಿತವನ್ನು ಮುಂದುವರಿಸಿ ಎಂದು ತಮ್ಮ ಸಚಿವ ಸಂಪುಟದ ಸದಸ್ಯರಿಗೆ ಕರೆ ನೀಡಿದ್ದಾರೆ. ಅಲ್ಲದೆ, ಬಿಜೆಪಿಯ ರಾಜಕಾರಣದ ಬಗ್ಗೆ ಎಚ್ಚರಿಕೆ ವಹಿಸುವಂತೆಯೂ ಸೂಚಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.


