ಸಿದ್ದರಾಮಯ್ಯ ಹಠ ಬಿಟ್ಟು ಡಿಕೆಶಿಗೆ ಕುರ್ಚಿ ಬಿಟ್ಟುಕೊಡಲಿ: ಇಲ್ಲವಾದಲ್ಲಿ ಸರ್ಕಾರ ಪತನ ಎಂದ ಸ್ವಾಮೀಜಿ

Updated on: Nov 27, 2025 | 3:57 PM

ಕರ್ನಾಟಕ ಕಾಂಗ್ರೆಸ್​ನಲ್ಲಿ ಕುರ್ಚಿ ಗುದ್ದಾಟ ದಿನಕ್ಕೊಂದು ತಿರುವು, ಕ್ಷಣಕ್ಕೊಂದು ದಿಕ್ಕು ಬದಲಿಸ್ತಿದೆ. ಹೀಗಾಗಿ ಕುರ್ಚಿ ಗುದ್ದಾಟ ತಾರಕಕಕ್ಕೇರಿದ್ದು, ಸಿಎಂ ಮತ್ತು ಡಿಸಿಎಂ ಬಣಗಳ ತಂತ್ರ ಪ್ರತಿತಂತ್ರ ಜೋರಾಗಿದೆ.. ಈ ಬಣ ಬಡಿದಾಟ ಮತ್ತು ಕುರ್ಚಿ ಕಾಳಗದ ಮಧ್ಯೆ ಸ್ವಾಮೀಜಿಗಳೂ ಸಹ ಅಖಾಡಕ್ಕೆ ಇಳಿದಿದ್ದಾರೆ. ಡಿಕೆ ಸಿಎಂ ಆಗಬೇಕು ಎಂದ ನಿರ್ಮಲಾನಂದನಾಥ ಶ್ರೀಗಳು ಹೇಳಿದ್ದಾರೆ. ಮತ್ತೊಂದೆಡೆ ಕಾಗಿನೆಲೆ ಪೀಠದ ನಿರಂಜನಾನಂದ ಶ್ರೀ ಯಾರು ಸಿಎಂ ಆಗ್ಬೇಕು ಅಂತ ಶಾಸಕರು ನಿರ್ಣಯಿಸುತ್ತಾರೆ ಎಂದು ಟಾಂಗ್ ಕೊಟ್ಟಿದ್ದಾರೆ. ಇದೀಗ ಮತ್ತೋರ್ವ ಸ್ವಾಮೀಜಿ ಧ್ವನಿಗೂಡಿಸಿದ್ದು, ಸಿದ್ದರಾಮಯ್ಯ ಹಠ ಬಿಟ್ಟು ಡಿ.ಕೆ.ಶಿವಕುಮಾರ್​ಗೆ ಕುರ್ಚಿ ಬಿಟ್ಟುಕೊಡಲಿ ಎಂದು ಕಿತ್ತೂರಿನ ಮಡಿವಾಳೇಶ್ವರ ಮಠದ ವೀರೇಶ್ವರ ಸ್ವಾಮೀಜಿ ಹೇಳಿದ್ದಾರೆ.

ಬೆಳಗಾವಿ, (ನವೆಂಬರ್ 27): ಕರ್ನಾಟಕ ಕಾಂಗ್ರೆಸ್​ನಲ್ಲಿ ಕುರ್ಚಿ ಗುದ್ದಾಟ ದಿನಕ್ಕೊಂದು ತಿರುವು, ಕ್ಷಣಕ್ಕೊಂದು ದಿಕ್ಕು ಬದಲಿಸ್ತಿದೆ. ಹೀಗಾಗಿ ಕುರ್ಚಿ ಗುದ್ದಾಟ ತಾರಕಕಕ್ಕೇರಿದ್ದು, ಸಿಎಂ ಮತ್ತು ಡಿಸಿಎಂ ಬಣಗಳ ತಂತ್ರ ಪ್ರತಿತಂತ್ರ ಜೋರಾಗಿದೆ.. ಈ ಬಣ ಬಡಿದಾಟ ಮತ್ತು ಕುರ್ಚಿ ಕಾಳಗದ ಮಧ್ಯೆ ಸ್ವಾಮೀಜಿಗಳೂ ಸಹ ಅಖಾಡಕ್ಕೆ ಇಳಿದಿದ್ದಾರೆ. ಡಿಕೆ ಸಿಎಂ ಆಗಬೇಕು ಎಂದ ನಿರ್ಮಲಾನಂದನಾಥ ಶ್ರೀಗಳು ಹೇಳಿದ್ದಾರೆ. ಮತ್ತೊಂದೆಡೆ ಕಾಗಿನೆಲೆ ಪೀಠದ ನಿರಂಜನಾನಂದ ಶ್ರೀ ಯಾರು ಸಿಎಂ ಆಗ್ಬೇಕು ಅಂತ ಶಾಸಕರು ನಿರ್ಣಯಿಸುತ್ತಾರೆ ಎಂದು ಟಾಂಗ್ ಕೊಟ್ಟಿದ್ದಾರೆ. ಇದೀಗ ಮತ್ತೋರ್ವ ಸ್ವಾಮೀಜಿ ಧ್ವನಿಗೂಡಿಸಿದ್ದು, ಸಿದ್ದರಾಮಯ್ಯ ಹಠ ಬಿಟ್ಟು ಡಿ.ಕೆ.ಶಿವಕುಮಾರ್​ಗೆ ಕುರ್ಚಿ ಬಿಟ್ಟುಕೊಡಲಿ ಎಂದು ಕಿತ್ತೂರಿನ ಮಡಿವಾಳೇಶ್ವರ ಮಠದ ವೀರೇಶ್ವರ ಸ್ವಾಮೀಜಿ ಹೇಳಿದ್ದಾರೆ.

ಟಿವಿ9ಗೆ ಮಾತನಾಡಿದ ಕಿತ್ತೂರಿನ ಮಡಿವಾಳೇಶ್ವರ ಮಠದ ವೀರೇಶ್ವರ ಸ್ವಾಮೀಜಿ, ಎರಡೂವರೆ ವರ್ಷ ಸಿದ್ದರಾಮಯ್ಯಗೆ ಡಿ.ಕೆ.ಶಿವಕುಮಾರ್ ಸಹಕರಿಸಿದ್ದಾರೆ. ವಚನ ಭ್ರಷ್ಟರಾಗದೆ ಸಿದ್ದರಾಮಯ್ಯ ಡಿಕೆಗೆ ಸಿಎಂ ಸ್ಥಾನ ಬಿಟ್ಟು ಕೊಡಬೇಕು. ಇಲ್ಲದಿದ್ದರೆ ಸರ್ಕಾರವೇ ಪತನವಾಗಲಿದೆ . ನಾನು ಯಾರ ಪರವಾಗಿಯೂ ಇಲ್ಲ, ನಾನು ಯಾರ ವಿರುದ್ಧವೂ ಇಲ್ಲ. ಮಾನವೀಯತೆ ದೃಷ್ಟಿಯಿಂದ ಸರ್ಕಾರಕ್ಕೆ ಮಾರ್ಗದರ್ಶನ ನೀಡುತ್ತಿದ್ದೇನೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Published on: Nov 27, 2025 03:55 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More