ದಾಖಲೆಯ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳೋದನ್ನೊಮ್ಮೆ ಕೇಳಬೇಕು!
ಸರ್ಕಾರ ಘೋಷಣೆ ಮಾಡುವ ಯೋಜನೆಗಳೆಲ್ಲ ಮೈಸೂರಿಂದ ಆರಂಭಗೊಂಡು ದಾವಣಗೆರೆವರೆಗೆ ಬಂದು ನಿಂತು ಬಿಡುತ್ತವೆ, ಅಲ್ಲಿಂದ ಮುಂದಕ್ಕೆ ಬರುತ್ತಿಲ್ಲ, ಬಜೆಟ್ ರೂಪಿಸುವಾಗ ಉತ್ತರ-ದಕ್ಷಿಣ ಎಂಬ ತಾರತಮ್ಯ ಇಟ್ಟುಕೊಳ್ಳದೆ ಸಮತೋಲನವನ್ನು ಕಾಪಾಡಿಕೊಂಡಿದ್ದರೆ ಉತ್ತರ ಕರ್ನಾಟಕಕ್ಕೆ ಈಗ ಎದುರಿಸುತ್ತಿರುವ ಸ್ಥಿತಿ ಬರುತ್ತಿರಲಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಬೆಂಗಳೂರು, ಮಾರ್ಚ್ 8: ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ತಾವು ಮಂಡಿಸಿದ ಬಜೆಟ್ ಬಗ್ಗೆ ಬೀಗುತ್ತಿರಬಹುದು, ಆದರೆ ಖುದ್ದು ಅವರ ಪಾರ್ಟಿ ಅಧ್ಯಕ್ಷರಿಗೆ ಬಜೆಟ್ ಖುಷಿ ನೀಡಿಲ್ಲ. ಕಲಬುರಗಿಯಲ್ಲಿ ಇಂದು ಮಾತಾಡಿದ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಹೇಳಿದ್ದನ್ನು ಗೇಲಿ ಮಾಡುತ್ತ, ಉತ್ತರ ಕರ್ನಾಟಕಕ್ಕೆ ₹5,000 ಕೋಟಿ ಅಲ್ಲ ಒಂದು ಲಕ್ಷ ಕೋಟಿ ನೀಡಿದರೂ ದಕ್ಷಿಣ ಕರ್ನಾಟಕದ ಸಮ ಬರಲಾರದು ಎಂದು ಹೇಳಿದರು. ಸರ್ಕಾರದ ತಾರತಮ್ಯ ನೀತಿಯನ್ನು ಖರ್ಗೆ ಉಗ್ರವಾಗಿ ಖಂಡಿಸಿದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ದಲಿತ ವಿರೋಧಿ ಬಿಜೆಪಿಯಿಂದ ಸಂವಿಧಾನಕ್ಕೆ ಆಪತ್ತು; ಬೆಳಗಾವಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
Latest Videos

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಜ್ಞಾವಿಧಿ

ಟಿವಿ9 ಎಕ್ಸ್ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?

ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್

ಸರ್ಕಾರದ ಕ್ರಮವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
