ಲೋಕಭವನದ ಆವರಣದಲ್ಲಿ ನೂತನ ಸಚಿವರ ಪದಗ್ರಹಣ: ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
Ministers Oath-Taking Ceremony: ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಗೈರು ಹಾಜರಾಗಿದ್ದಾರೆ. ಲೋಕಭವನದ ಆವರಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ 19 ಮಂದಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದು, ಎಂಎಲ್ಎಸಿ ಗಾಯಿತ್ರಿ ಶಾಂತೇಗೌಡ ಅವರು ಮಾತ್ರ ಹೈಕಮಾಂಡ್ ಲಿಸ್ಟ್ನಲ್ಲಿ ಹೆಸರಿದ್ದರೂ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ.
ಬೆಂಗಳೂರು, ಆಗಸ್ಟ್ 03: ಕರ್ನಾಟಕ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಭಾರಿ ಟ್ವಿಸ್ಟ್ಗಳ ಬಳಿಕ ಅಂತಿಮವಾಗಿ 19 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ ಈ ಪ್ರಮುಖ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಗೈರಾಗಿದ್ದಾರೆ. ಮಧ್ಯಾಹ್ನವೇ ತಮ್ಮ ಆಪ್ತರೊಂದಿಗೆ ಪ್ರಮಾಣ ವಚನ ಸಮಾರಂಭಕ್ಕೆ ತಾನು ಹೋಗುವುದಿಲ್ಲ ಎಂದು ಅವರು ಹೇಳಿದ್ದರಂತೆ. ಈ ಗೈರಿಗೆ ನಿಖರ ಕಾರಣ ಮಾತ್ರ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us

