ಜುಬ್ಬಾದ ಮೇಲೆ ಕಾಫಿ ಚೆಲ್ಲಿಕೊಂಡ ಸಿದ್ದರಾಮಯ್ಯ: ಕಲೆ ತೊಳೆಯಲು ಮಹಿಳೆಯರ ಸಹಾಯ

Updated on: Apr 02, 2023 | 5:05 PM

ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಭಟನೆಯಲ್ಲಿ ಜುಬ್ಬಾದ ಮೇಲೆ ಕಾಫಿ ಚೆಲ್ಲಿಕೊಂಡಿದ್ದಾರೆ. ಜುಬ್ಬಾದ ಉಂಟಾದ ಕಾಫಿ ಕಲೆಯನ್ನು ತೊಳೆಯಲು ಮಹಿಳಾ ಕಾರ್ಯಕರ್ತೆಯರು ಸಹಾಯ ಮಾಡಿದ್ದಾರೆ.

ಮೈಸೂರು: ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಯಿಂದ ಮೀಸಲಾತಿ ದುರ್ಬಳಕೆ ಆರೋಪ ಹಿನ್ನೆಲೆ ಸಂವಿಧಾನ ಬಚಾವೋ, ದೇಶ್​ ಬಚಾವೋ ಹೆಸರಲ್ಲಿ ಮೈಸೂರಿನ ಪುರಭವನದ ಮುಂಭಾಗ ಕಾಂಗ್ರೆಸ್ ನಾಯಕರಿಂದ ಧರಣಿ ಮಾಡಲಾಗುತ್ತಿದೆ. ಈ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಪ್ರತಿಭಟನೆಯಲ್ಲಿ ಜುಬ್ಬಾದ ಮೇಲೆ ಕಾಫಿ ಚೆಲ್ಲಿಕೊಂಡಿದ್ದಾರೆ. ಜುಬ್ಬಾದ ಉಂಟಾದ ಕಾಫಿ ಕಲೆಯನ್ನು ತೊಳೆಯಲು ಮಹಿಳಾ ಕಾರ್ಯಕರ್ತೆಯರು ಸಹಾಯ ಮಾಡಿದ್ದಾರೆ. ಧರಣಿಯಲ್ಲಿ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಮಾಜಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಜಮೀರ್ ಉಪಸ್ಥಿತರಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Apr 02, 2023 05:05 PM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More