AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah: ಸಿದ್ದರಾಮಯ್ಯ ಮುಖ್ಯಮಂತ್ರಿ ಅನ್ನೋದು ಬಹುತೇಕ ಖಚಿತ, ಆದರೆ ಹಿರಿಯ ನಾಯಕನದ್ದುಈಗಲೂ ನಿರ್ಭಾವುಕ ಮುಖಭಾವ!

Siddaramaiah: ಸಿದ್ದರಾಮಯ್ಯ ಮುಖ್ಯಮಂತ್ರಿ ಅನ್ನೋದು ಬಹುತೇಕ ಖಚಿತ, ಆದರೆ ಹಿರಿಯ ನಾಯಕನದ್ದುಈಗಲೂ ನಿರ್ಭಾವುಕ ಮುಖಭಾವ!

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ| Edited By: |

Updated on:May 17, 2023 | 12:32 PM

Share

ಕಳೆದೆರಡು ದಿನಗಳಿಂದ ಸಿದ್ದರಾಮಯ್ಯ ಇದೇ ಮುಖಮುದ್ರೆಯೊಂದಿಗೆ ದೆಹಲಿಯಲ್ಲಿ ಸುತ್ತುತ್ತಿದ್ದಾರೆ.

ದೆಹಲಿ: ರಾಜ್ಯದ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅಂತ ಹೆಚ್ಚು ಕಡಿಮೆ ಖಚಿತವಾಗಿದೆ. ಆದರೆ, ಇಂದು ಬೆಳಗ್ಗೆ ಸಿದ್ದರಾಮಯ್ಯ ದೆಹಲಿಯ ಹೋಟೆಲೊಂದರಿಂದ ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಲು ತೆರಳುವಾಗ ಮುಖಗಂಟಿಕ್ಕಿಕೊಂಡೇ ಇದ್ದರು. ದೆಹಲಿಯ ಪತ್ರಕರ್ತರು ಅವರನ್ನು ಸುತ್ತುವರಿದು ಪ್ರಶ್ನೆಗಳ ಸುರಿಮಳೆಗರೆಯುತ್ತಿದ್ದರೂ ಸಿದ್ದರಾಮಯ್ಯ ತುಟಿ ಬಿಚ್ಚಲಿಲ್ಲ. ಕೆಲ ಮಹಿಳಾ ವರದಿಗಾರರು, ಸಮ್ಮಿಶ್ರ ಸರ್ಕಾರ ಪತನಕ್ಕೆ ನೀವೇ ಕಾರಣ ಅಂತ ಮಾಜಿ ಸಚಿವ ಡಾ ಕೆ ಸುಧಾಕರ್ (Dr K Sudhakar) ದೂರುತ್ತಿದ್ದಾರೆ, ಇದಕ್ಕೆ ನೀವೇನು ಹೇಳುತ್ತೀರಿ ಅಂತ ಗಂಭೀರ ಸ್ವರೂಪದ ಪ್ರಶ್ನೆ ಕೇಳಿದರೂ ಸಿದ್ದರಾಮಯ್ಯನವರದ್ದು ಅನೆ ನಡಿಗೆ! ಕಳೆದೆರಡು ದಿನಗಳಿಂದ ಸಿದ್ದರಾಮಯ್ಯ ಇದೇ ಮುಖಮುದ್ರೆಯೊಂದಿಗೆ ದೆಹಲಿಯಲ್ಲಿ ಸುತ್ತುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 17, 2023 12:31 PM

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.