Karnataka Assembly Polls: ವರುಣಾ ಕ್ಷೇತ್ರದ ಗ್ರಾಮವೊಂದರಲ್ಲಿ ಉರಿಬಿಸಿಲ್ಲಿ ಕಾದುನಿಂತಿದ್ದ ಅಜ್ಜಿಯೊಂದಿಗೆ ಮಾತಾಡಿದ ಸಿದ್ದರಾಮಯ್ಯ
ಸಿದ್ದರಾಮಯ್ಯ ಆಕೆಯತ್ತ ವಾಲಿದಾಗ ಅಜ್ಜಿ ಅವರ ಕಿವಿಯಲ್ಲಿ ಏನನ್ನೋ ಹೇಳುತ್ತಾರೆ. ಅದನ್ನು ಕೇಳಿಸಿಕೊಳ್ಳುವ ಸಿದ್ದರಾಮಯ್ಯ ಆಯ್ತು ಸರಿ ಎನ್ನುವಂತೆ ತಲೆಯಾಡಿಸುತ್ತಾರೆ.
ಮೈಸೂರು: ವರುಣಾ ಕ್ಷೇತ್ರದ ಕಾರ್ಯ (Karya) ಹೆಸರಿನ ಗ್ರಾಮದಲ್ಲಿ ಸಿದ್ದರಾಮಯ್ಯನವರ (Siddaramaiah) ಭೇಟಿಗಾಗಿ ಸುಡು ಬಿಸಿಲಲ್ಲಿ ಕಾದು ನಿಂತಿದ್ದ ವೃದ್ಧೆಯನ್ನು (elderly woman) ನೋಡಿ ನಿಮಗೆ ಶಬರಿ ನೆನಪಾದರೆ ಉತ್ಪ್ರೇಕ್ಷೆ ಅನಿಸದು. ಅಜ್ಜಿಯ ಆಸೆ ಸಿದ್ದರಾಮಯ್ಯನವರನ್ನು ಭೇಟಿಯಾಗುವುದಷ್ಟೇ ಆಗಿರಲಿಲ್ಲ, ಅವರನ್ನು ಮಾತಾಡಿಸಿ ಏನನ್ನೋ ಹೇಳಬೇಕಾಗಿತ್ತು. ಸಿದ್ದರಾಮಯ್ಯ ಅಜ್ಜಿಯ ಹತ್ತಿರ ಬಂದಾಗ ಅಲ್ಲಿದ್ದ ಜನ, ‘ಮಾತಾಡು ಅಜ್ಜಿ ಮಾತಾಡು..’ ಅನ್ನುತ್ತಾರೆ. ಅಜ್ಜಿ ತಮ್ಮೆಡೆ ನಡೆದು ಬರುತ್ತಿರುವುದನ್ನು ನೋಡುವ ಸಿದ್ದರಾಮಯ್ಯ, ‘ಏನ್ ಅಜ್ಜೀ?’ ಅನ್ನುತ್ತಾರೆ. ಜನರ ಗಲಾಟೆಯಲ್ಲಿ ಆಕೆ ಹೇಳುವುದು ಕೇಳದ ಕಾರಣ, ಸಿದ್ದರಾಮಯ್ಯ ಆಕೆಯತ್ತ ವಾಲಿದಾಗ ಅಜ್ಜಿ ಅವರ ಕಿವಿಯಲ್ಲಿ ಏನನ್ನೋ ಹೇಳುತ್ತಾರೆ. ಅದನ್ನು ಕೇಳಿಸಿಕೊಳ್ಳುವ ಸಿದ್ದರಾಮಯ್ಯ ಆಯ್ತು ಸರಿ ಎನ್ನುವಂತೆ ತಲೆಯಾಡಿಸುತ್ತಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್-ಸಿಎಂ ಕಾಮಿಡಿ

