Siddaramaiah: ಮುಖ್ಯಮಂತ್ರಿಯಾಗಿ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ

Updated on: May 20, 2023 | 1:50 PM

ವಿಚಾರವಾದಿಯಾಗಿರುವ ಅವರು ಯಾರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಅನ್ನೋದು ಕುತೂಹಲ ಕೆರಳಿಸಿತ್ತು.

ಬೆಂಗಳೂರು: ಹಲವಾರು ಕಸರತ್ತು, ಹಗ್ಗ-ಜಗ್ಗಾಟ, ಆತಂಕ ಮತ್ತು ದುಗುಡಗಳ ಬಳಿಕ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ (chief minister) ಸಿದ್ದರಾಮಯ್ಯನವರು (Siddaramaiah) ಪ್ರಮಾಣ ವಚನ ಸ್ವೀಕರಿಸಿದರು. ವಿಚಾರವಾದಿಯಾಗಿರುವ (rationalist) ಅವರು ಯಾರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಅನ್ನೋದು ಕುತೂಹಲ ಕೆರಳಿಸಿತ್ತು. ಸಿದ್ದರಾಮಯ್ಯನವರು ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್, ರಂದೀಪ್ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ, ನಟ ಕಮಲ್​ ಹಾಸನ್, ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್ ಮೊದಲಾದವರು ಹಾಜರಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 20, 2023 01:25 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More