ಮಂಗಳೂರು: ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ

Updated on: Jan 11, 2026 | 9:44 AM

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯಗೊಳಿಸುವ ಕ್ರಮವನ್ನು ವಿರೋಧಿಸಿದ್ದಾರೆ. ಒಂದು ವೇಳೆ ರಾಜ್ಯಪಾಲರು ಈ ಕಾನೂನಿಗೆ ಸಹಿ ಹಾಕಿದರೆ ಕೇಂದ್ರ ಸರ್ಕಾರ ಮತ್ತು ರಾಷ್ಟ್ರಪತಿಗಳಿಗೂ ಮನವಿ ಸಲ್ಲಿಸಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ರಾಜ್ಯಪಾಲರಿಂದ ಹಿಂದಿರುಗಿದ ಮೂರು ಮಸೂದೆಗಳಿಗೆ ಸ್ಪಷ್ಟೀಕರಣ ನೀಡಿ ಮರುಸಲ್ಲಿಸುವ ಬಗ್ಗೆಯೂ ಅವರು ಮಾಹಿತಿ ನೀಡಿದರು.

ಮಂಗಳೂರು, ಜ.11: ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕನ್ನಡ ಶಾಲೆಗಳಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯಗೊಳಿಸುವ ಯಾವುದೇ ಪ್ರಯತ್ನವನ್ನು ನಾವು ಒಪ್ಪುವುದಿಲ್ಲ. ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಮಾತೃಭಾಷೆಯನ್ನು ಕಡ್ಡಾಯವಾಗಿ ಹೇರುವುದು ಸರಿಯಲ್ಲ. ಮಾತೃಭಾಷೆ ಮಾತನಾಡುವವರಿಗೆ ಮಲಯಾಳಂ ಅನ್ನು ಮೊದಲ ಭಾಷೆಯಾಗಿ ಕಲಿಯುವಂತೆ ಒತ್ತಾಯಿಸುವುದು ಸರಿಯಲ್ಲ. ಒಂದು ವೇಳೆ ರಾಜ್ಯಪಾಲರು ಇಂತಹ ಮಸೂದೆಗೆ ಸಹಿ ಹಾಕಿ ಕಾನೂನಾಗಿಸಿದರೆ, ಕರ್ನಾಟಕ ಸರ್ಕಾರವು ಹೋರಾಟ ನಡೆಸಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಈ ವಿಷಯದ ಬಗ್ಗೆ ಕೇಂದ್ರ ಸರ್ಕಾರ ಮತ್ತು ರಾಷ್ಟ್ರಪತಿಗಳಿಗೂ ಮನವಿ ಸಲ್ಲಿಸುವ ಮೂಲಕ ಹೋರಾಟ ನಡೆಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jan 11, 2026 09:44 AM
Follow Us
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More