ಅಧಿಕಾರದಲ್ಲಿ ಮುಂದುವರಿಯಲು ಸಿದ್ದರಾಮಯ್ಯರಿಂದ ಹಿಂದೂ ಸಮಾಜ ಒಡೆವ ಪ್ರಯತ್ನ: ಪ್ರತಾಪ್ ಸಿಂಹ

ಅರುಣ್​ ಕುಮಾರ್​ ಬೆಳ್ಳಿ

Updated on: Apr 19, 2025 | 1:57 PM

ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಾಖಲೆಯ 16 ಬಾರಿ ಬಜೆಟ್ ಮಂಡಿಸಿದ್ದರೂ ಜನಗಣತಿ ಮತ್ತು ಸಾಮಾಜಿಕ ಹಾಗೂ ಅರ್ಥಿಕ ಸಮೀಕ್ಷೆಗಳ ಬಗ್ಗೆ ಕನಿಷ್ಠ ಜ್ಞಾನ ಹೊಂದಿಲ್ಲದಿರೋದು ಆಶ್ಚರ್ಯ ಮೂಡಿಸುತ್ತದೆ, ಯಾಕೆಂದರೆ 1948ರ ಜನಗಣತಿ ಕಾಯ್ದೆ ಪ್ರಕಾರ ಪ್ರತಿ ಹತ್ತು ವರ್ಷಗಳಿಗೊಮ್ಮೆ ಜನಗಣತಿ ನಡೆಯುತ್ತದೆ ಮತ್ತು ಅದರ ಬೆನ್ನಲ್ಲೇ ಸೋಶಿಯೋ-ಇಕಾನಾಮಿಕ್ ಸರ್ವೇ ಕೂಡ ನಡೆಯುತ್ತದೆ ಎಂದು ಮಾಜಿ ಸಂಸದ ಹೇಳಿದರು.

ಬೆಂಗಳೂರು, ಏಪ್ರಿಲ್ 19: ಜಾತಿ ಗಣತಿ ಹೆಸರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು (CM Siddaramaiah) ಹಿಂದೂ ಸಮಾಜವನ್ನು ಒಡೆಯಲು ಹವಣಿಸುತ್ತಿದ್ದಾರೆ, ಹಿಂದೆ 2006ರಲ್ಲಿ ಅವರು ಅಹಿಂದ ಹೆಸರಲ್ಲಿ ಅಲ್ಪಸಂಖ್ಯಾತರು, ದಲಿತರ ಮತ್ತು ಹಿಂದುಳಿದ ವರ್ಗಗಳನ್ನು ಹಿಂದೂಗಳಿಂದ ಬೇರೆ ಮಾಡಿದರು, ಈಗ ಕೇವಲ ಅಧಿಕಾರದಲ್ಲಿ ಮುಂದುವರಿಯವುದಕ್ಕೋಸ್ಕರ ಇಡೀ ಹಿಂದೂ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ಹಿಂದೂಗಳು ತಾನು ಲಿಂಗಾಯತ, ಗೌಡ, ಒಕ್ಕಲಿಗ, ದಲಿತ ಅಂತ ಹೇಳೋದನ್ನು ಬಿಟ್ಟು ಎಲ್ಲರೂ ಒಗ್ಗಟ್ಟಿನಿಂದ ಇರುವ ಯೋಚನೆ ಮಾಡಬೇಕು ಎಂದು ಪ್ರತಾಪ್ ಹೇಳಿದರು.

ಇದನ್ನೂ ಓದಿ:  ಜಾತಿ ಸಂಖ್ಯೆಯಲ್ಲಿ ಸಾಕಷ್ಟು ವ್ಯತ್ಯಾಸ: ಜಾತಿ ಗಣತಿ ವರದಿಯಲ್ಲಿ ಒಳಪಂಗಡ ಗೊಂದಲ, ಚರ್ಚೆಗೆ ಗ್ರಾಸ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.