ಸಿದ್ದರಾಮಯ್ಯ ಒಬ್ಬ ಜನನಾಯಕ; ಅವರ ಬಗ್ಗೆ ಬಿಕೆ ಹರಿಪ್ರಸಾದ್ ತಪ್ಪು ಸಂದೇಶ ನೀಡುತ್ತಿದ್ದಾರೆ: ಈಶ್ವರಾನಂದ ಶ್ರೀ

ಸಿದ್ದರಾಮಯ್ಯ ಯಾವತ್ತೂ ರಾಜಕಾರಣ ಮಾಡಿದವರಲ್ಲ, ಹಾಗೆ ಮಾಡಿದ್ದೇಯಾದರೆ, ಕುರುಬ ಸಮುದಾಯದವರು ಅವರ ಸಂಪುಟದಲ್ಲಿರುತ್ತಿದ್ದರು. ಸಿದ್ದರಾಮಯ್ಯ ಬಡವರ, ದಲಿತರ, ಹಿಂದುಳಿದವರ ಮತ್ತು ಮಹಿಳೆಯರ ಪರ ಧ್ವನಿಯೆತ್ತಿರುವ ಜನನಾಯಕ ಎಂದು ಶ್ರೀಗಳು ಹೇಳಿದರು. ಸಿದ್ದರಾಮಯ್ಯ ಎಲ್ಲ ಸಮುದಾಯದವರನ್ನು ಒಗ್ಗೂಡಿಸಿಕೊಂಡು ಹೋಗುತ್ತಿದ್ದಾರೆ ಎಂದು ಶ್ರೀಗಳು ಹೇಳಿದರು,

|

Updated on: Sep 12, 2023 | 11:41 AM

ಚಿತ್ರದುರ್ಗ: ಇದನ್ನು ನಿರೀಕ್ಷಿಸಲಾಗಿತ್ತು. ರಾಜ್ಯ ಕಾಂಗ್ರೆಸ್ ನ ಹಿರಿಯ ನಾಯಕರಲ್ಲಿ ಒಬ್ಬರಾಗಿರುವ ಬಿಕೆ ಹರಿಪ್ರಸಾದ್ (BK Hariprasad) ತಮ್ಮನ್ನು ಮಂತ್ರಿ ಮಾಡದ ಅಸಮಾಧಾನ, ಕೋಪ-ತಾಪ, ಬೇಗುದಿಯನ್ನು ಸಾರ್ವಜನಿಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ವಿರುದ್ಧ ಉಗ್ರ ಟೀಕೆಗಳನ್ನು ಮಾಡುತ್ತಾ ಹೊರಹಾಕುತ್ತಿದ್ದಾರೆ. ನಿನ್ನೆ ಎಐಸಿಸಿ ಮಧ್ಯಪ್ರವೇಶಿಸಿ ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡದಂತೆ ಹರಿಪ್ರಸಾದ್ ಗೆ ತಾಕೀತು ಮಾಡಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡ ಪ್ರಸಾದ್ ಟೀಕೆಗಳನ್ನು ಖಂಡಿಸಿದ್ದಾರೆ. ಕೆಲ್ಲೋಡು ಹತ್ತಿರದ ಕಾಗಿನೆಲೆ ಶಾಖಾಮಠದ ಈಶ್ವರಾನಂದ ಶ್ರೀಗಳು (Eshwaranand Shree) ಇಂದು ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ನಾಗೇನಹಳ್ಳಿಯಲ್ಲಿ ನಡೆದ ಧಾರ್ಮಿಕ ಸಭೆಯೊಂದರಲ್ಲಿ ಹರಿಪ್ರಸಾದ್ ಮಾತುಗಳನ್ನು ಖಂಡಿಸಿದ್ದಾರೆ. ಹರಿಪ್ರಸಾದ್ ತಪ್ಪು ಸಂದೇಶವನ್ನು ಜನಕ್ಕೆ ನೀಡುತ್ತಿದ್ದಾರೆ, ಸಿದ್ದರಾಮಯ್ಯ ಯಾವತ್ತೂ ರಾಜಕಾರಣ ಮಾಡಿದವರಲ್ಲ, ಹಾಗೆ ಮಾಡಿದ್ದೇಯಾದರೆ, ಕುರುಬ ಸಮುದಾಯದವರು (Kuruba Community) ಅವರ ಸಂಪುಟದಲ್ಲಿರುತ್ತಿದ್ದರು. ಸಿದ್ದರಾಮಯ್ಯ ಬಡವರ, ದಲಿತರ, ಹಿಂದುಳಿದವರ ಮತ್ತು ಮಹಿಳೆಯರ ಪರ ಧ್ವನಿಯೆತ್ತಿರುವ ಜನನಾಯಕ ಎಂದು ಶ್ರೀಗಳು ಹೇಳಿದರು. ಸಿದ್ದರಾಮಯ್ಯ ಎಲ್ಲ ಸಮುದಾಯದವರನ್ನು ಒಗ್ಗೂಡಿಸಿಕೊಂಡು ಹೋಗುತ್ತಿದ್ದಾರೆ, ಹರಿಪ್ರಸಾದ್ ಇದನ್ನೆಲ್ಲ ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಆದೇಶ ಧಿಕ್ಕರಿಸಿದರೆ ಏನಾಗುತ್ತೆ ಅಂತ ಕುಮಾರಸ್ವಾಮಿಗೆ ಗೊತ್ತು: ಪರಮೇಶ್ವರ್
ಆದೇಶ ಧಿಕ್ಕರಿಸಿದರೆ ಏನಾಗುತ್ತೆ ಅಂತ ಕುಮಾರಸ್ವಾಮಿಗೆ ಗೊತ್ತು: ಪರಮೇಶ್ವರ್
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ