ವಿರೋಧಪಕ್ಷದ ನಾಯಕರಾಗಿದ್ದಾಗಲೂ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ನಾಯಕರಿಂದ ಈಗಿನಷ್ಟೇ ಗೌರವ ಗಿಟ್ಟಿಸುತ್ತಿದ್ದರು!

ಅರುಣ್​ ಕುಮಾರ್​ ಬೆಳ್ಳಿ

Updated on: Aug 14, 2023 | 2:23 PM

ವೇದಿಕೆ ಮೇಲೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಹಿರಿಯ ನಾಯಕ ಮತ್ತು ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ಮತ್ತು ಸಿದ್ದರಾಮಯ್ಯ ಸಂಪುಟದ ಸಚಿವರು ಮತ್ತು ಶಾಸಕರಿದ್ದಾರೆ. ಹಿಂದಿನ ಸಾಲಿನಲ್ಲೂ ಹಲವು ಮಂತ್ರಿ ಮತ್ತು ಶಾಸಕರು ಕುಳಿತಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಗತ್ತು ಮತ್ತು ಠೀವಿಯ ಬಗ್ಗೆ ನಾವು ಆಗಾಗ ಚರ್ಚಿಸುತ್ತಿರುತ್ತೇವೆ. ಅವರು ಮುಖ್ಯಮಂತ್ರಿಯಾಗಿರುವ ಕಾರಣ ಹೀಗೆ ಅಂತ ಭಾವಿಸಿದರೆ ತಪ್ಪಾಗುತ್ತದೆ. ಯಾಕೆಂದರೆ, ವಿರೋಧ ಪಕ್ಷದ ನಾಯಕನಾಗಿದ್ದಾಗ (Leader of Opposition) ಅಥವಾ ಸಚಿವ-ಶಾಸಕನಾಗಿದ್ದಾಗಲೂ ಅವರಲ್ಲಿ ಇದೇ ಥರಹ ಗತ್ತು ಕಾಣಿಸುತಿತ್ತು. ಇದು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ (KPCC office) ನಡೆದ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಆಗಮಿಸಿದಾಗಿನ ದೃಶ್ಯಾವಳಿ. ಅವರು ವೇದಿಕೆಗೆ ಆಗಮಿಸಿದಾಗ ಅಲ್ಲಿದ್ದ ಹಿರಿಯ ನಾಯಕರು, ಮಂತ್ರಿಗಳು, ಶಾಸಕರಿ ಗೌರವಸೂಚಕವಾಗಿ ಎದ್ದು ನಿಲ್ಲುತ್ತಾರೆ. ಅದು ಬಿಡಿ ಶಿಷ್ಟಾಚಾರ. ಆದರೆ, ಆಗಲೇ ಹೇಳಿದಂತೆ ಸಿದ್ದರಾಮಯ್ಯ ಕೇವಲ ಶಾಸಕರಾಗಿಯೂ ಪಕ್ಷದ ನಾಯಕರಿಂದ ಇಂಥ ಗೌರವ ಪಡೆದುಕೊಳ್ಳುತ್ತಾರೆ. ವೇದಿಕೆ ಮೇಲೆ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಹಿರಿಯ ನಾಯಕ ಮತ್ತು ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ಮತ್ತು ಸಿದ್ದರಾಮಯ್ಯ ಸಂಪುಟದ ಸಚಿವರು ಮತ್ತು ಶಾಸಕರಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.