ಅಧಿಕಾರ ಪಡೆವ ದುರಾಸೆಗಾಗಿ ಸಿದ್ದರಾಮಯ್ಯರಿಂದ ನನ್ನ ವಿರುದ್ಧ ಅಕ್ರಮ ಗಣಿಗಾರಿಕೆ ಆರೋಪ: ಜನಾರ್ಧನ ರೆಡ್ಡಿ

ಅರುಣ್​ ಕುಮಾರ್​ ಬೆಳ್ಳಿ

Updated on: Jun 12, 2025 | 7:09 PM

ಅಂಜನಾದಿ ಹನುಮನ ಪರಮ ಭಕ್ತನಾಗಿರುವ ತನಗೆ ಗಂಗಾವತಿ ಜನರ ಸೇವೆ ಮಾಡುವ ಅವಕಾಶ ಆ ಭಗವಂತನಿಂದಲೇ ಪ್ರಾಪ್ತಿಯಾಗಿದೆ, ಹನುಮ ಜನಿಸಿದ ಅಂಜನಾದ್ರಿ ಪ್ರದೇಶವನ್ನು ಅಯೋಧ್ಯಾ ಮತ್ತು ತಿರುಪತಿ ಮಾದರಿಯಲ್ಲಿ ಅಭಿವೃದ್ಧಿ ಮಾಡುವ ಉದ್ದೇಶ ತನಗಿದೆ ಎಂದು ಹೇಳಿದ ರೆಡ್ಡಿ, ಮೈನಿಂಗ್ ಲೀಸ್ ತನಗೆ ನೀಡಿರುವುದಕ್ಕೆ ಸಂಬಂಧಿಸಿದಂತೆ ತನಗೆ ಶಿಕ್ಷೆ ಪ್ರಕಟವಾಗಿತ್ತು ಎಂದು ಹೇಳಿದರು.

ಬೆಂಗಳೂರು, ಜೂನ್ 12: ಸಿಬಿಐ ಕೋರ್ಟ್ ವಿಧಿಸಿದ್ದ ಶಿಕ್ಷೆಯ ವಿರುದ್ಧ ತೆಲಂಗಾಣ ಹೈಕೋರ್ಟ್​​ನಿಂದ ತಾತ್ಕಾಲಿಕ ತಡೆಯಾಜ್ಞೆ (interim stay order) ಪಡೆದು ಇವತ್ತು ಜೈಲಿನಿಂದ ಹೊರಬಂದ ಗಾಲಿ ಜನಾರ್ಧನ ರೆಡ್ಡಿ ಮಾಧ್ಯಮಗಳೊಂದಿಗೆ ಮಾತಾಡುತ್ತಾ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರ ಪಡೆಯಬೇಕೆಂಬ ರಾಜಕೀಯ ದುರಾಸೆಯಿಂದ ಬಳ್ಳಾರಿವರೆಗೆ ಪಾದಯಾತ್ರೆ ಮಾಡಿ, ತನ್ನ ವಿರುದ್ಧ ಅಕ್ರಮ ಗಣಿಗಾರಿಕೆಯ ಆರೋಪ ಹೊರೆಸಿ ಜೈಲಿಗೆ ಹೋಗುವಂತೆ ಮಾಡಿದ್ದರು ಎಂದು ಹೇಳಿದರು. ಆದರೆ, ಸಿಬಿಐ ಕೋರ್ಟ್ ತನ್ನ ತೀರ್ಪಿನಲ್ಲಿ ಅಕ್ರಮ ಗಣಿಗಾರಿಕೆ ನಡೆದಿಲ್ಲ ಎಂದು ಹೇಳಿದೆ ಮತ್ತು ಓಬಳಪುರಂ ಮೈನಿಂಗ್ ಕಂಪನಿಯಿಂದ ಬೇರೆ ದೇಶಗಳಿಗೆ ಅದಿರನ್ನು ರಫ್ತು ಮಾಡಿದರೆಂಬ ಅರೋಪವನ್ನೂ ನ್ಯಾಯಾಲಯ ಹೊಡೆದು ಹಾಕಿದೆ ಎಂದು ರೆಡ್ಡಿ ಹೇಳಿದರು.

ಇದನ್ನೂ ಓದಿ:  ಜನಾರ್ಧನ ರೆಡ್ಡಿಗೆ ಶಿಕ್ಷೆ; ನ್ಯಾಯಾಂಗ ವ್ಯವಸ್ಥೆಯಲ್ಲಿ ನಮ್ಮ ವಿಶ್ವಾಸ ಇಮ್ಮಡಿಗೊಂಡಿದೆ: ಎಸ್ ಅರ್ ಹಿರೇಮಠ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.