ತಮ್ಮ ಜಮೀನಿಗೆ ₹ 62 ಕೋಟಿ ಕೇಳುವ ಸಿದ್ದರಾಮಯ್ಯ ಪರಿಹಾರಕ್ಕಾಗಿ ರೈತರು ಪಡುವ ಪಡಿಪಾಟಲು ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ

ತಮ್ಮ ಜಮೀನಿಗೆ ₹ 62 ಕೋಟಿ ಕೇಳುವ ಸಿದ್ದರಾಮಯ್ಯ ಪರಿಹಾರಕ್ಕಾಗಿ ರೈತರು ಪಡುವ ಪಡಿಪಾಟಲು ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
|

Updated on: Jul 05, 2024 | 1:04 PM

ನಿನ್ನೆ ಮುಡಾ ಸೈಟು ಹಂಚಿಕೆ ಹಗರಣದ ಬಗ್ಗೆ ಮುಖ್ಯಮಂತ್ರಿ ಪರ ಸುದ್ದಿಗೋಷ್ಟಿ ನಡೆಸಿದ ಅವರ ಕಾನೂನು ಸಲಹೆಗಾರ ಎಎಸ್ ಪೊನ್ನಣ್ಣರನ್ನು ಕುಮಾರಸ್ವಾಮಿ ತಿವಿದರು. ಹಿಂದೆ ಸಹಾಯಕ ಅಡ್ವೋಕೇಟ್ ಜನರಲ್ ಆಗಿದ್ದ ಮತ್ತು ಈಗ ಶಾಸಕರಾಗಿರುವವರು ಸಿದ್ದರಾಮಯ್ಯ ಪರ ವಕಾಲತ್ತು ವಹಿಸಿ ಏನೇನೋ ಹೇಳಿದ್ದನ್ನು ಗಮನಿಸಿದ್ದೇನೆ, ಕಾದು ನೋಡೋಣ ಮುಂದೇನಾಗುತ್ತೆ ಅಂತ ಕೇಂದ್ರ ಸಚಿವ ಹೇಳಿದರು.

ಮೈಸೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಇಂದು ನಗರಕ್ಕಾಗಮಿಸಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಮುಡಾ ಅಕ್ರಮ ಸೈಟು ಹಂಚಿಕೆ ಹಗರಣದ ಬಗ್ಗೆ ಮಾತಾಡುತ್ತಾ, ಈಗ ಸಿಡಿ ತಯಾರಿಕಾ ಕೆಲಸ ನಿಂತಿದೆ ಅದರೆ ಮುಡಾದ ಕೆಲಸ ಶುರುವಾಗಿದೆ ಅಂತ ಒಗಟಿನಲ್ಲಿ ಹೇಳಿದರು. ನಿನ್ನೆ ಬೆಂಗಳೂರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮಗೆ ಸೈಟುಗಳು ಬೇಡ, ಅವುಗಳನ್ನು ಮುಡಾ ವಾಪಸ್ಸು ತೆಗೆದುಕೊಳ್ಳಲಿ, ಅವುಗಳ ಬದಲಿಗೆ ಮುಡಾ ಸ್ವಧೀನಪಡಿಸಿಕೊಂಡಿರುವ ನಮ್ಮ 3.16 ಎಕರೆ ಜಮೀನಿಗೆ ಮಾರುಕಟ್ಟೆ ಬೆಲೆ ರೂ. 62 ಕೋಟಿ ನೀಡಲಿ ಅಂತ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಅವರು ಅಷ್ಟು ಸುಲಭವಾಗಿ ಮುಡಾ ₹ 62 ಕೋಟಿ ಕೊಡಲಿ ಅಂತ ಹೇಳಿದ್ದಾರೆ, ಅದರೆ ಸರ್ಕಾರದ ವಿವಿಧ ಯೋಜನೆಗಳಿಗೆ ರೈತರ ಜಮೀನು ಸ್ವಾಧೀನ ಮಾಡಿಕೊಳ್ಳಲಾಗುತ್ತದೆ, ಅವರಿಗೆ ಪರಿಹಾರ ನೀಡುವಾಗ ಮಾರುಕಟ್ಟೆ ಬೆಲೆ ಮಾನದಂಡ ಅನುಸರಿಸಲಾಗುತ್ತದೆಯೇ? ಅಮಾಯಕ ರೈತರು ತಮ್ಮ ಪರಿಹಾರದ ಹಣ ಪಡೆಯಲು ಕೋರ್ಟು ಕಚೇರಿ ಅಂತ ಅಲೆದಾಡುತ್ತಾ ಚಪ್ಪಲಿ ಸವೆಸುತ್ತಾರೆ. ಮುಖ್ಯಮಂತ್ರಿಯವರು ತಮ್ಮ ಜಮೀನಿಗೆ ರೂ. 62 ಕೋಟಿ ಕೇಳುವ ಮೊದಲು ರೈತರುಪಡುವ ಬವಣೆ ಬಗ್ಗೆ ಯೋಚಿಸಿದರೆ? ಅಂತ ಕೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕೆಂಪೇಗೌಡ ಜಯಂತಿ ನಿಮಿತ್ತ ಸರ್ಕಾರೀ ಆಹ್ವಾನ ಪತ್ರಿಕೆಯಲ್ಲಿ ದೇವೇಗೌಡ ಹಾಗೂ ನನ್ನ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ