ತಮ್ಮ ಜಮೀನಿಗೆ ₹ 62 ಕೋಟಿ ಕೇಳುವ ಸಿದ್ದರಾಮಯ್ಯ ಪರಿಹಾರಕ್ಕಾಗಿ ರೈತರು ಪಡುವ ಪಡಿಪಾಟಲು ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ

ನಿನ್ನೆ ಮುಡಾ ಸೈಟು ಹಂಚಿಕೆ ಹಗರಣದ ಬಗ್ಗೆ ಮುಖ್ಯಮಂತ್ರಿ ಪರ ಸುದ್ದಿಗೋಷ್ಟಿ ನಡೆಸಿದ ಅವರ ಕಾನೂನು ಸಲಹೆಗಾರ ಎಎಸ್ ಪೊನ್ನಣ್ಣರನ್ನು ಕುಮಾರಸ್ವಾಮಿ ತಿವಿದರು. ಹಿಂದೆ ಸಹಾಯಕ ಅಡ್ವೋಕೇಟ್ ಜನರಲ್ ಆಗಿದ್ದ ಮತ್ತು ಈಗ ಶಾಸಕರಾಗಿರುವವರು ಸಿದ್ದರಾಮಯ್ಯ ಪರ ವಕಾಲತ್ತು ವಹಿಸಿ ಏನೇನೋ ಹೇಳಿದ್ದನ್ನು ಗಮನಿಸಿದ್ದೇನೆ, ಕಾದು ನೋಡೋಣ ಮುಂದೇನಾಗುತ್ತೆ ಅಂತ ಕೇಂದ್ರ ಸಚಿವ ಹೇಳಿದರು.

ತಮ್ಮ ಜಮೀನಿಗೆ ₹ 62 ಕೋಟಿ ಕೇಳುವ ಸಿದ್ದರಾಮಯ್ಯ ಪರಿಹಾರಕ್ಕಾಗಿ ರೈತರು ಪಡುವ ಪಡಿಪಾಟಲು ಬಗ್ಗೆ ಯೋಚಿಸಿದರೇ? ಕುಮಾರಸ್ವಾಮಿ
|

Updated on: Jul 05, 2024 | 1:04 PM

ಮೈಸೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಇಂದು ನಗರಕ್ಕಾಗಮಿಸಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಮುಡಾ ಅಕ್ರಮ ಸೈಟು ಹಂಚಿಕೆ ಹಗರಣದ ಬಗ್ಗೆ ಮಾತಾಡುತ್ತಾ, ಈಗ ಸಿಡಿ ತಯಾರಿಕಾ ಕೆಲಸ ನಿಂತಿದೆ ಅದರೆ ಮುಡಾದ ಕೆಲಸ ಶುರುವಾಗಿದೆ ಅಂತ ಒಗಟಿನಲ್ಲಿ ಹೇಳಿದರು. ನಿನ್ನೆ ಬೆಂಗಳೂರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮಗೆ ಸೈಟುಗಳು ಬೇಡ, ಅವುಗಳನ್ನು ಮುಡಾ ವಾಪಸ್ಸು ತೆಗೆದುಕೊಳ್ಳಲಿ, ಅವುಗಳ ಬದಲಿಗೆ ಮುಡಾ ಸ್ವಧೀನಪಡಿಸಿಕೊಂಡಿರುವ ನಮ್ಮ 3.16 ಎಕರೆ ಜಮೀನಿಗೆ ಮಾರುಕಟ್ಟೆ ಬೆಲೆ ರೂ. 62 ಕೋಟಿ ನೀಡಲಿ ಅಂತ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಅವರು ಅಷ್ಟು ಸುಲಭವಾಗಿ ಮುಡಾ ₹ 62 ಕೋಟಿ ಕೊಡಲಿ ಅಂತ ಹೇಳಿದ್ದಾರೆ, ಅದರೆ ಸರ್ಕಾರದ ವಿವಿಧ ಯೋಜನೆಗಳಿಗೆ ರೈತರ ಜಮೀನು ಸ್ವಾಧೀನ ಮಾಡಿಕೊಳ್ಳಲಾಗುತ್ತದೆ, ಅವರಿಗೆ ಪರಿಹಾರ ನೀಡುವಾಗ ಮಾರುಕಟ್ಟೆ ಬೆಲೆ ಮಾನದಂಡ ಅನುಸರಿಸಲಾಗುತ್ತದೆಯೇ? ಅಮಾಯಕ ರೈತರು ತಮ್ಮ ಪರಿಹಾರದ ಹಣ ಪಡೆಯಲು ಕೋರ್ಟು ಕಚೇರಿ ಅಂತ ಅಲೆದಾಡುತ್ತಾ ಚಪ್ಪಲಿ ಸವೆಸುತ್ತಾರೆ. ಮುಖ್ಯಮಂತ್ರಿಯವರು ತಮ್ಮ ಜಮೀನಿಗೆ ರೂ. 62 ಕೋಟಿ ಕೇಳುವ ಮೊದಲು ರೈತರುಪಡುವ ಬವಣೆ ಬಗ್ಗೆ ಯೋಚಿಸಿದರೆ? ಅಂತ ಕೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕೆಂಪೇಗೌಡ ಜಯಂತಿ ನಿಮಿತ್ತ ಸರ್ಕಾರೀ ಆಹ್ವಾನ ಪತ್ರಿಕೆಯಲ್ಲಿ ದೇವೇಗೌಡ ಹಾಗೂ ನನ್ನ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ

Follow us
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್