AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡೂವರೆ ವರ್ಷ ಸಿದ್ದರಾಮಯ್ಯ ಅಧಿಕಾರ ನಡೆಸುತ್ತಾರೆ, ಉಳಿದ ಅವಧಿ ಶಿವಕುಮಾರ್ ನಡೆಸಲಿ: ಇಕ್ಬಾಲ್ ಹುಸ್ಸೇನ್ಎರಡೂವರೆ ವರ್ಷ ಸಿದ್ದರಾಮಯ್ಯ ಅಧಿಕಾರ ನಡೆಸುತ್ತಾರೆ, ಉಳಿದ ಅವಧಿ ಶಿವಕುಮಾರ್ ನಡೆಸಲಿ: ಇಕ್ಬಾಲ್ ಹುಸ್ಸೇನ್

ಎರಡೂವರೆ ವರ್ಷ ಸಿದ್ದರಾಮಯ್ಯ ಅಧಿಕಾರ ನಡೆಸುತ್ತಾರೆ, ಉಳಿದ ಅವಧಿ ಶಿವಕುಮಾರ್ ನಡೆಸಲಿ: ಇಕ್ಬಾಲ್ ಹುಸ್ಸೇನ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jul 02, 2025 | 1:45 PM

Share

ತಾನು ಸಿದ್ದರಾಮಯ್ಯನವರ ಅಭಿಮಾನಿ, ದೇವರಾಜ ಅರಸು ನಂತರ ರಾಜ್ಯದ ಜನತೆಗೆ ಅತಿಹೆಚ್ಚು ಕಾರ್ಯಕ್ರಮಗಳನ್ನು ಅವರು ನೀಡಿದ್ದಾರೆ, ತನ್ನ ಒಂದೇ ವಾದವೇನೆಂದರೆ ಅವರು ಮೊದಲೊಮ್ಮೆ ಮುಖ್ಯಮಂತ್ರಿಯಾಗಿ ಪೂರ್ತಿ 5-ವರ್ಷ ಅಧಿಕಾರ ಆನುಭಸಿದ್ದಾರೆ ಮತ್ತು ಈಗಲೂ ಎರಡೂವರೆ ವರ್ಷ ಅಧಿಕಾರ ನಡೆಸುತ್ತಿದ್ದಾರೆ, ಉಳಿದ ಅವಧಿಗೆ ಶಿವಕುಮಾರ್​ಗೆ ಅವಕಾಶ ಸಿಗಲಿ ಅನ್ನೋದು ಅಂತ ಇಕ್ಬಾಲ್ ಹೇಳಿದರು.

ರಾಮನಗರ, ಜುಲೈ 2: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೇಳಿಕೆ ನೀಡಕೂಡದೆಂದು ನೋಟೀಸ್ ಕೊಟ್ಟಾಗ್ಯೂ ರಾಮನಗರ ಶಾಸಕ ಇಕ್ಬಾಲ್ ಹುಸ್ಸೇನ್ ತನ್ನ ಹೇಳಿಕೆಗೆ ಬದ್ಧ ಎಂದು ಹೇಳಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಇಕ್ಬಾಲ್, ಶಿವಕುಮಾರ್​ ನಮ್ಮ ಅಧ್ಯಕ್ಷರು, ಪಕ್ಷದ ಸದಸ್ಯರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವ ಸ್ವಾತಂತ್ರ್ಯ ಅವರಿಗಿದೆ, ನನಗೆ ನೋಟೀಸ್ ನೀಡಿ 7ದಿನಗೊಳಗೆ ಉತ್ತರ ನೀಡುವಂತೆ ಹೇಳಿದ್ದಾರೆ, ಉತ್ತರ ಕೊಡುತ್ತೇನೆ, ಅದರೆ ನನ್ನ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ ಎಂದು ಹೇಳಿದರು. ಬೇರೆ ಶಾಸಕರೂ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತಾಡಿದ್ದಾರೆ, ಅವರಿಗಿಲ್ಲದ ನೋಟೀಸ್ ನಿಮಗ್ಯಾಕೆ ಅಂತ ಕೇಳಿದರೆ, ಮಾಧ್ಯಮದವರು ಅವರನ್ನೇ ಕೇಳಬೇಕು ಅಂತ ಇಕ್ಬಾಲ್ ಹೇಳಿದರು.

ಇದನ್ನೂ ಓದಿ:  ಹೊರಗಿನವರಾಗಿರುವ ಕುಮಾರಸ್ವಾಮಿ ರಾಮನಗರದಲ್ಲಿ ಕೇವಲ ರಾಜಕಾರಣ ಮಾಡಿದ್ದಾರೆ: ಇಕ್ಬಾಲ್ ಹುಸ್ಸೇನ್

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.