ಸಿದ್ದರಾಮಯ್ಯ ಸ್ಥಾನ ಬಿಟ್ಟುಕೊಡೋದು ಶತಸಿದ್ಧ, ಅಲ್ಪಾವಧಿಯ ವಿಸ್ತರಣೆಯೂ ಸಿಗಲಾರದು: ಆರ್ ಅಶೋಕ
ವಿಪಕ್ಷ ನಾಯಕನಾಗಿ ತನಗಿರುವ ಮಾಹಿತಿ ಪ್ರಕಾರ ಸಿದ್ದರಾಮಯ್ಯ ಮತ್ತಾರು ತಿಂಗಳು ಇಲ್ಲವೇ ಒಂದ ವರ್ಷದ ವಿಸ್ತರಣೆಯನ್ನು ಕೇಳಿದ್ದಾರೆ, ಆದರೆ ಶಿವಕುಮಾರ್ ಅದಕ್ಕೆ ಒಪ್ಪುತ್ತಿಲ್ಲ, ಈ ಸಮಯದಲ್ಲಿ ದೆಹಲಿಯಲ್ಲ್ಲಿರಬೇಕಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಗಳೂರಿಗೆ ಬಂದಿದ್ದಾರೆ, ಸಿದ್ದರಾಮಯ್ಯರಾದರೋ ದೆಹಲಿಯಲ್ಲಿ ಮಾಧ್ಯಮ ಗೋಷ್ಠಿ ನಡೆಸಿ 5 ವರ್ಷ ನಾನೇ ಸಿಎಂ ಅನ್ನುತ್ತಿದ್ದಾರೆ, ಅದರೆ ಅವರು ಬದಲಾಗೋದು ನೂರಕ್ಕೆ ನೂರರಷ್ಟು ಸತ್ಯ ಎಂದು ಅಶೋಕ ಹೇಳಿದರು.
ಬೆಂಗಳೂರು, ಜುಲೈ 11: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಇನ್ನೂ ದೆಹಲಿಯಲ್ಲೇ ಬೀಡು ಬಿಟ್ಟಿದ್ದಾರೆ. ಏತನ್ಮಧ್ಯೆ, ನಗರದಲ್ಲಿ ನಮ್ಮ ವರದಿಗಾರನೊಂದಿಗೆ ಮಾತಾಡಿರುವ ವಿರೋಧ ಪಕ್ಷದ ನಾಯಕ ಅರ್ ಅಶೋಕ (R Ashoka), ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಶಿವಕುಮಾರ್ ಆ ಸ್ಥಾನಕ್ಕೇರೋದು ಶತಸಿದ್ಧ ಎಂದು ಹೇಳಿದರು. ತಾನು ಭವಿಷ್ಯ ನುಡಿದಿದ್ದು ಮತ್ತು ರಾಜಣ್ಣ ಕ್ರಾಂತಿ ನಡೆಯುವ ಮುನ್ಸೂಚನೆ ನೀಡಿದ್ದು ನಿಜವಾಗುತ್ತಿದೆ, ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ, ಅದು ಮೊದಲಿಂದಲೂ ಇತ್ತು, ಈಗ ವಿಕೋಪಕ್ಕೆ ಹೋಗಿದೆ, ಕೆಲ ಮಂತ್ರಿಗಳು ಸಹ ಸ್ಥಾನ ಉಳಿಸಿಕೊಳ್ಳಲು ದೆಹಲಿಗೆ ಹೋಗಿದ್ದಾರೆ ಎಂದು ಅಶೋಕ ಹೇಳಿದರು.
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
Loading...
Unable to load recommendations.
Follow Us