ಸಿದ್ದರಾಮಯ್ಯ ಅವರು ಧಮ್​ನಿಂದ ಗೆದ್ದಿದ್ದಾರೆ: ಹಾಡಿಹೊಗಳಿದ ಬಿಜೆಪಿ ಅಭ್ಯರ್ಥಿ ರಾಜುಗೌಡ

| Updated By: ಗಂಗಾಧರ​ ಬ. ಸಾಬೋಜಿ

Updated on: Apr 07, 2024 | 6:18 PM

ಮೇ 7ರಂದು ಸುರಪುರ ವಿಧಾನಸಭೆ ಕ್ಷೇತ್ರದ ಬೈಎಲೆಕ್ಷನ್​ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ರಾಜುಗೌಡ ಅಬ್ಬರದ ಮತ ಪ್ರಚಾರ ನಡೆಸಿದ್ದಾರೆ. ಜಿಲ್ಲೆಯ ಸುರಪುರ ಕ್ಷೇತ್ರದ ವ್ಯಾಪ್ತಿಯ ಗ್ರಾಮದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿ ಅವರು, ಸಿಎಂ ಸಿದ್ದರಾಮಯ್ಯರನ್ನ ಹಾಡಿಹೊಗಳಿದ್ದಾರೆ. ಸಿದ್ದರಾಮಯ್ಯ ಧಮ್​ನಿಂದಲೇ ಗೆದ್ದಿದ್ದಾರೆ ಎಂದು ಹೇಳಿದ್ದಾರೆ.

ಯಾದಗಿರಿ, ಏಪ್ರಿಲ್ 07: ಮೇ 7ರಂದು ಸುರಪುರ ವಿಧಾನಸಭೆ ಕ್ಷೇತ್ರದ ಬೈಎಲೆಕ್ಷನ್​ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ರಾಜುಗೌಡ (Raju Gowda) ಅಬ್ಬರದ ಮತ ಪ್ರಚಾರ ನಡೆಸಿದ್ದಾರೆ. ಜಿಲ್ಲೆಯ ಸುರಪುರ ಕ್ಷೇತ್ರದ ವ್ಯಾಪ್ತಿಯ ಗ್ರಾಮದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿ ಅವರು, ಸಿಎಂ ಸಿದ್ದರಾಮಯ್ಯರನ್ನ ಹಾಡಿಹೊಗಳಿದ್ದಾರೆ. ಸಿದ್ದರಾಮಯ್ಯ ಧಮ್​ನಿಂದಲೇ ಗೆದ್ದಿದ್ದಾರೆ. ಕಾಂಗ್ರೆಸ್​ಗೆ ಇಷ್ಟು ಸೀಟು ಬಂದಿವೆ. ಸಿದ್ದರಾಮಯ್ಯ ಸಾಹೇಬರನ್ನ ಇಳಿಸಿದರೆ ಸರ್ಕಾರ‌‌ ಉಳಿಯಲ್ಲ. ಗೃಹಲಕ್ಷ್ಮೀ ಹಣ 3 ತಿಂಗಳಿಗೋ 6 ತಿಂಗಳಿಗೋ ಬರುತ್ತೆ. ನಾನು ಗೆದ್ರೆ ಸಿಎಂ ಸಾಹೇಬರ ಬಳಿ ಮಾತಾಡಿ ಹಾಕಿಸ್ತೇನೆ. ಕಾಂಗ್ರೆಸ್​ನವರು ಗೆದ್ರೆ ಸಿದ್ದರಾಮಯ್ಯರ ಮುಂದೆ ಮಾತಾಡಲ್ಲ. ಸಿದ್ದರಾಮಯ್ಯನವರು ಹೇ ಅಂದ್ರೆ ಅವರು ಸುಮ್ಮನಾಗುತ್ತಾರೆ. ನಾನಾದರೆ ಅಣ್ಣಾ ಅಂತ ಹೇಳಿ ಕೆಲಸವನ್ನು ಮಾಡಿಸುತ್ತೇನೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow us on