ಯಾದಗಿರಿ, ಏಪ್ರಿಲ್ 07: ಮೇ 7ರಂದು ಸುರಪುರ ವಿಧಾನಸಭೆ ಕ್ಷೇತ್ರದ ಬೈಎಲೆಕ್ಷನ್ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ರಾಜುಗೌಡ (Raju Gowda) ಅಬ್ಬರದ ಮತ ಪ್ರಚಾರ ನಡೆಸಿದ್ದಾರೆ. ಜಿಲ್ಲೆಯ ಸುರಪುರ ಕ್ಷೇತ್ರದ ವ್ಯಾಪ್ತಿಯ ಗ್ರಾಮದಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿ ಅವರು, ಸಿಎಂ ಸಿದ್ದರಾಮಯ್ಯರನ್ನ ಹಾಡಿಹೊಗಳಿದ್ದಾರೆ. ಸಿದ್ದರಾಮಯ್ಯ ಧಮ್ನಿಂದಲೇ ಗೆದ್ದಿದ್ದಾರೆ. ಕಾಂಗ್ರೆಸ್ಗೆ ಇಷ್ಟು ಸೀಟು ಬಂದಿವೆ. ಸಿದ್ದರಾಮಯ್ಯ ಸಾಹೇಬರನ್ನ ಇಳಿಸಿದರೆ ಸರ್ಕಾರ ಉಳಿಯಲ್ಲ. ಗೃಹಲಕ್ಷ್ಮೀ ಹಣ 3 ತಿಂಗಳಿಗೋ 6 ತಿಂಗಳಿಗೋ ಬರುತ್ತೆ. ನಾನು ಗೆದ್ರೆ ಸಿಎಂ ಸಾಹೇಬರ ಬಳಿ ಮಾತಾಡಿ ಹಾಕಿಸ್ತೇನೆ. ಕಾಂಗ್ರೆಸ್ನವರು ಗೆದ್ರೆ ಸಿದ್ದರಾಮಯ್ಯರ ಮುಂದೆ ಮಾತಾಡಲ್ಲ. ಸಿದ್ದರಾಮಯ್ಯನವರು ಹೇ ಅಂದ್ರೆ ಅವರು ಸುಮ್ಮನಾಗುತ್ತಾರೆ. ನಾನಾದರೆ ಅಣ್ಣಾ ಅಂತ ಹೇಳಿ ಕೆಲಸವನ್ನು ಮಾಡಿಸುತ್ತೇನೆ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.