Chikkaballapur News; ಸಿದ್ದರಾಮಯ್ಯ ಶಾಶ್ವತ ಮುಖ್ಯಮಂತ್ರಿ ಅಲ್ಲ, ದ್ವೇಷದ ರಾಜಕಾರಣದಿಂದ ದೂರವಿರಲಿ: ಡಾ ಕೆ ಸುಧಾಕರ್, ಬಿಜೆಪಿ ನಾಯಕ

|

Updated on: Jul 29, 2023 | 10:22 AM

ಬಿಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಿಸುವಾಗ ಒತ್ತಡಗಳಿದ್ದರೂ ದ್ವೇಷದ ರಾಜಕಾರಣಕ್ಕೆ ಇಳಿಯಲಿಲ್ಲಎಂದು ಸುಧಾಕರ್ ಹೇಳಿದರು.

ಚಿಕ್ಕಬಳ್ಳಾಪುರ: ನಗರದಲ್ಲಿಂದು ಟಿವಿ9 ವರದಿಗಾರನೊಂದಿಗೆ ಮಾತಾಡಿದ ಬಿಜೆಪಿ ಧುರೀಣ ಡಾ ಕೆ ಸುಧಾಕರ್ (Dr K Sudhakar), ಕಾಂಗ್ರೆಸ್ ಸರ್ಕಾರ ಮೆಡಿಕಲ್ ಕಾಲೇಜುಗಳ ಯಾವುದೇ ಕ್ರಮ ಜರುಗಿಸುವ ಮೊದಲು ಎರಡು ಬಾರಿ ಯೋಚಿಸಲಿ, ಸರ್ಕಾರಕ್ಕೆ ತಕರಾರುಗಳಿದ್ದರೆ ತನ್ನ ವಿರುದ್ಧ ತನಿಖೆ ಮಾಡಿಸಲಿ, ಅದರೆ ಮೆಡಿಕಲ್ ಕಾಲೇಜುಗಳ ಮೇಲೆ ದ್ವೇಷ ಸಾಧಿಸಲು ಮುಂದಾದರೆ ಮೆಡಿಕೋಗಳ ಭವಿಷ್ಯ ಹಾಳಾಗುತ್ತದೆ ಎಂದು ಹೇಳಿದರು. ಬಿಎಸ್ ಯಡಿಯೂರಪ್ಪ (BS Yediyurappa) ಮತ್ತು ಬಸವರಾಜ ಬೊಮ್ಮಾಯಿ (Basavaraj Bommai) ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಿಸುವಾಗ ಒತ್ತಡಗಳಿದ್ದರೂ ದ್ವೇಷದ ರಾಜಕಾರಣಕ್ಕೆ ಇಳಿಯಲಿಲ್ಲ. ಸಿದ್ದರಾಮಯ್ಯನವರು (Siddaramaiah) ಶಾಶ್ವತ ಮುಖ್ಯಮಂತ್ರಿ ಅಲ್ಲ. ಹಾಗಾಗಿ ಅವರು ದ್ವೇಷದ ರಾಜಕಾರಣ ಮಾಡದೆ ರಾಜ್ಯದ ಅಭಿವೃದ್ಧಿಯತ್ತ ಗಮನ ನೀಡಲಿ ಎಂದು ಸುಧಾಕರ್ ಹೇಳಿದರು.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ