ಮಾತನಾಡುವ ಭರದಲ್ಲಿ ಸಿದ್ದರಾಮಯ್ಯ ಯಡವಟ್ಟು: ‘ಕಾಂಗ್ರೆಸ್​ ನುಡಿದಂತೆ ನಡೆಯಲ್ಲ’ ಎಂದ ಸಿಎಂ

Edited By:

Updated on: Apr 06, 2024 | 3:47 PM

ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಗೌತಮ್​ ಪರ ಪ್ರಚಾರ ವೇಳೆ ಮಾತನಾಡಿದ ಸಿದ್ದರಾಮಯ್ಯ, ಮಾತಿನ ಭರದಲ್ಲಿ ‘ಕಾಂಗ್ರೆಸ್ ಕೆಲಸ ಮಾಡಲ್ಲ, ನುಡಿದಂತೆ ನಡೆಯಲ್ಲ’ ಎಂದು ಹೇಳುವ ಮೂಲಕ ಯಡವಟ್ಟು ಮಾಡಿಕೊಂಡಿದ್ದಾರೆ. ವಿಡಿಯೋ ನೋಡಿ.

ಕೋಲಾರ, ಏಪ್ರಿಲ್​ 06: ಸಾಕಷ್ಟು ಬಾರಿ ರಾಜಕೀಯ ನಾಯಕರು ಮಾತನಾಡುವಾಗ ಇಲ್ಲಾ ಭಾಷಣ ಮಾಡುವಾಗ ಮಾತಿನ ಭರದಲ್ಲಿ ಬೇರೆಯವರ ಹೆಸರು ಹೇಳುವುದಂಟು. ಅದೇ ರೀತಿಯಾಗಿ ಸಿಎಂ ಸಿದ್ದರಾಮಯ್ಯ (Siddaramaiah) ತಮ್ಮ ಮಾತಿನ ಭರದಲ್ಲಿ ‘ಕಾಂಗ್ರೆಸ್ ಕೆಲಸ ಮಾಡಲ್ಲ, ನುಡಿದಂತೆ ನಡೆಯಲ್ಲ’ ಎಂದು ಹೇಳುವ ಮೂಲಕ ಯಡವಟ್ಟು ಮಾಡಿಕೊಂಡಿದ್ದಾರೆ. ಜಿಲ್ಲೆಯ ಮುಳಬಾಗಿಲಿನಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಗೌತಮ್​ ಪರ ಪ್ರಚಾರ ವೇಳೆ ಮಾತನಾಡಿದ ಸಿದ್ದರಾಮಯ್ಯ, ‘ಕಾಂಗ್ರೆಸ್ ನುಡಿದಂತೆ ನಡೆಯಲ್ಲ’ ಎಂದು ಹೇಳಿದ್ದಾರೆ. ಬಳಿಕ ಮತ್ತೆ ನುಡಿದಂತೆ ನಡೆದಿದ್ದೇವೆ ಎಂದು ಸರಿಪಡಿಸಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.​  

Follow Us
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More