AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡವ ಮತ್ತು ರೈತ ವಿರೋಧಿ ಸಿದ್ದರಾಮಯ್ಯ ಸರ್ಕಾರಕ್ಕೆ ಅಧಿವೇಶನದಲ್ಲಿ ಕಾದಿದೆ ಶಾಸ್ತಿ: ಬಿವೈ ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಈಗಷ್ಟೇ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ವಿಜಯೇಂದ್ರ ಮಾಧ್ಯಮಳೊಂದಿಗೆ ಮಾತಾಡುವಾಗ ಆಥವಾ ಹೇಳಿಕೆಗಳನ್ನು ನೀಡುವಾಗ ಭಾಷೆಯ ಮರ್ಯಾದೆಯನ್ನು ಕಡೆಗಾಣಿಸುತ್ತಿರುವುದು ಕನ್ನಡಿಗರ ಗಮನಕ್ಕೆ ಬರುತ್ತಿದೆ. ಇವತ್ತು ಸವಳಂಗಾದಲ್ಲಿ ಅವರು ಸರ್ಕಾರದ ಸೊಕ್ಕು ಮುರಿಯುತ್ತೇವೆ ಅಂತ ಹೇಳಿದರು. ಅದರಲ್ಲ್ಲಿ ತಪ್ಪೇನು ಇಲ್ಲ ಮತ್ತು ಪದ ಅಸಂಸದೀಯವೂ ಅಲ್ಲ. ಆದರೆ ಅಂಥ ಪದ ಬಳಸದೆಯೂ ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಬಹುದಿತ್ತು. ಬಿಎಸ್ ಯಡಿಯೂರಪ್ಪ ಎಷ್ಟೇ ಆವೇಶದಲ್ಲಿದ್ದರೂ ಸಭ್ಯ ಪದಗಳನ್ನು ಬಳಸುತ್ತಿದ್ದರು.

ಅರುಣ್​ ಕುಮಾರ್​ ಬೆಳ್ಳಿ
|

Updated on: Nov 30, 2023 | 1:49 PM

Share

ದಾವಣಗೆರೆ: ನಿನ್ನೆ ಶಿವಮೊಗ್ಗ ಜಿಲ್ಲೆ ಪ್ರವಾಸದಲ್ಲಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಇವತ್ತು ದಾವಣಗರೆ ಜಿಲ್ಲೆಯಲ್ಲಿದ್ದಾರೆ. ಜಿಲ್ಲೆಯ ಸವಳಂಗದಲ್ಲಿ (Savalanga) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಬೆಳಗಾವಿ ವಿಧಾನಸಭಾ ಅಧಿವೇಶನದಲ್ಲಿ (Belagavi Assembly Session) ರಾಜ್ಯ ಸರ್ಕಾರದ ವೈಫಲ್ಯಗಳನ್ನೆಲ್ಲ ಹೊರಹಾಕುತ್ತೇವೆ ಎಂದು ಹೇಳಿದರು. ರಾಜ್ಯದಲ್ಲಿ ಭೀಕರ ಬರಗಾಲ ತಲೆದೋರಿದೆ, ರೈತರು, ಕಬ್ಬುಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಅಧಿಕಾರದಲ್ಲಿರುವ ಸಿದ್ದರಾಮಯ್ಯ ಸರ್ಕಾರ ರೈತ ವಿರೋಧಿ ಮತ್ತು ಬಡವರ ವಿರೋಧಿ ಅನ್ನೋದು ಸಾಬೀತಾಗಿದೆ ಎಂದು ವಿಜಯೇಂದ್ರ ಹೇಳಿದರು. ಉತ್ತರ ಕರ್ನಾಟಕದಲ್ಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ, ಸರ್ಕಾರ ಅಭಿವೃದ್ಧಿ ಕಾರ್ಯಗಳಿಗಾಗಿ ಶಾಸಕರಿಗೆ ಅನುದಾನ ಬಿಡುಗಡೆ ಮಾಡದೆ ವಂಚಿಸುತ್ತಿದೆ, ಕಾಂತರಾಜ್ ವರದಿಯನ್ನು ನಿರ್ಲಕ್ಷಿಸಿದೆ ಎಂದು ಹೇಳಿದ ಅವರು ಅಧಿವೇಶನದಲ್ಲಿ ಸರ್ಕಾರದ ಸೊಕ್ಕು ಮುರಿಯುತ್ತೇವೆ ಅಂತ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​