ಬೆಂಗಳೂರಿಗೆ ಬಂದಾಗ ಸಿಎಂ ಕಿವಿಯಲ್ಲಿ ಮೋದಿ ಹೇಳಿದ್ದೇನು?: ಸಿದ್ದರಾಮಯ್ಯರಿಂದಲೇ ಸಿಕ್ತು ಉತ್ತರ

Edited By:

Updated on: Apr 20, 2026 | 12:37 PM

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರ ಜೊತೆಗೆ ಸಿಎಂ ಸಿದ್ದರಾಮಯ್ಯ ಆಪತ್ತವಾಗಿ ಮಾತನಾಡಿರು ಫೋಟೋ ವೈರಲ್​​ ಆಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ, ಮಹಿಳಾ ಮೀಸಲಾತಿ ಬಗ್ಗೆ ಅವರು ಅಭಿಪ್ರಾಯ ಕೇಳಿದ್ದು, ನನ್ನ ಅನಿಸಿಕೆ ತಿಳಿಸಿದ್ದೇನೆ. ಅದು ಬಿಟ್ಟು ಮತ್ತೇನೂ ಮಾತುಕತೆ ನಮ್ಮ ನಡುವೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮೈಸೂರು, ಏಪ್ರಿಲ್​​ 20: ಏಪ್ರಿಲ್ 15ರಂದು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಮಂತ್ರಿ ಮೋದಿ ಸ್ವಾಗತದ ವೇಳೆ ಅವರ ಜೊತೆಗೆ ಸಿಎಂ ಸಿದ್ದರಾಮಯ್ಯ ಮಾತನಾಡುತ್ತಿರುವ ಫೋಟೋವೊಂದು ಭಾರಿ ವೈರಲ್​​ ಆಗಿತ್ತು. ಈ ಬಗ್ಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, ಪ್ರಧಾನಮಂತ್ರಿ ಮೋದಿ ಮತ್ತು ನಾನು ಗುಟ್ಟಾಗಿ ಏನೂ ಮಾತನಾಡಿಲ್ಲ. ಮಹಿಳಾ ಮೀಸಲಾತಿ ಬಗ್ಗೆ ನಿಮ್ಮ ಅಭಿಪ್ರಾಯ ಏನು ಅಂತಾ ಕೇಳಿದರು. ನಾನು ಮಹಿಳಾ ಮೀಸಲಾತಿ ಪರವಾಗಿದ್ದೇನೆ ಅಂತಾ ಹೇಳಿದೆ ಅಷ್ಟೇ. ಅದು ಬಿಟ್ಟು ಬೇರೆ ಏನೂ ಮಾತನಾಡಿಲ್ಲ ಎಂದು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More