ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಫಸ್ಟ್​​ ರಿಯಾಕ್ಷನ್; ಇಲ್ಲಿದೆ ಮಾಹಿತಿ

Updated on: May 28, 2026 | 3:43 PM

ಸಿದ್ದರಾಮಯ್ಯ ಅವರು ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹೈಕಮಾಂಡ್ ಸೂಚನೆಯಂತೆ ರಾಜೀನಾಮೆ ನೀಡಿರುವ ಅವರು, ರಾಜ್ಯಪಾಲರು ಸಂವಿಧಾನಾತ್ಮಕವಾಗಿ ಅಂಗೀಕರಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ನಿವಾಸದ ಎದುರು ಅಭಿಮಾನಿಗಳು ಕಣ್ಣೀರಿಟ್ಟಿದ್ದು, ಸಿದ್ದರಾಮಯ್ಯ ಅವರನ್ನು ಭಾವುಕರನ್ನಾಗಿಸಿದೆ. ರಾಜೀನಾಮೆ ಸಲ್ಲಿಕೆ ಬಳಿಕ ಅವರು ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.​​

ಬೆಂಗಳೂರು, ಮೇ 28: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಲೋಕಭವನಕ್ಕೆ ತೆರಳಿ ರಾಜೀನಾಮೆ ಪತ್ರ ನೀಡಿದ್ದೇನೆ. ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಬೆಂಗಳೂರಿನಲ್ಲಿ ಇಲ್ಲ. ಹಾಗಾಗಿ ಅವರ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ. ಮೊನ್ನೆ ಹೈಕಮಾಂಡ್​ನವರು ರಾಜೀನಾಮೆ ಕೊಡಿ ಎಂದು ಹೇಳಿದ್ದರು. ಹೈಕಮಾಂಡ್​ ಸೂಚಿಸಿದಾಗ ಅದಕ್ಕೆ ಸಮ್ಮತಿ ಸೂಚಿಸಿದ್ದೆ. ನಾಡಿದ್ದು ರಾಜೀನಾಮೆ ಕೊಡುತ್ತೇನೆ ಎಂದು ಅವರಿಗೆ ತಿಳಿಸಿದ್ದೆ. ಹಾಗಾಗಿ ಇಂದು ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿದ್ದೇನೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More