ಮೈಸೂರಿನಲ್ಲಿ ಸಿದ್ದರಾಮಯ್ಯ ನೂತನ ನಿವಾಸದ ಗೃಹಪ್ರವೇಶ: ರಾತ್ರಿಯಿಂದಲೇ ಹೋಮ-ಹವನ, ಪೂಜೆ
ಮೈಸೂರಿನ ಕುವೆಂಪುನಗರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೂತನ ನಿವಾಸದ ಗೃಹಪ್ರವೇಶ ಪೂಜೆ ವಿಜೃಂಭಣೆಯಿಂದ ನೆರವೇರುತ್ತಿದೆ. ಭಾನುವಾರ ರಾತ್ರಿಯಿಂದ ಗಣಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು. ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಕುಟುಂಬದ ಸದಸ್ಯರು ಈ ಶುಭ ಕಾರ್ಯದಲ್ಲಿ ಭಾಗವಹಿಸಿದರು.
ಮೈಸೂರು, ಸೆಪ್ಟೆಂಬರ್ 14: ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೂತನ ಮನೆಯ ಗೃಹಪ್ರವೇಶ ಸಮಾರಂಭ ಇಂದು ನೆರವೇರುತ್ತಿದ್ದು, ಪೂಜಾ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗುತ್ತಿದೆ. ನಗರದ ಕುವೆಂಪುನಗರ ಬಡಾವಣೆಯಲ್ಲಿ ನಿರ್ಮಿಸಲಾಗಿರುವ ಈ ನಿವಾಸದಲ್ಲಿ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಸಾಂಪ್ರದಾಯಿಕ ಪೂಜೆಗಳನ್ನು ನೆರವೇರಿಸಲಾಯಿತು. ಗೃಹಪ್ರವೇಶದ ಅಂಗವಾಗಿ ಭಾನುವಾರ ರಾತ್ರಿಯಿಂದಲೇ ವಿವಿಧ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿದ್ದವು. ಗಣಹೋಮ ಸೇರಿದಂತೆ ಹಲವು ಪೂಜಾ ಕಾರ್ಯಕ್ರಮಗಳನ್ನು ಶಾಸ್ತ್ರೋಕ್ತವಾಗಿ ನಡೆಸಲಾಯಿತು. ಈ ಶುಭ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ, ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಕುಟುಂಬದ ಎಲ್ಲ ಸದಸ್ಯರು ಭಾಗವಹಿಸಿ, ಪೂಜೆಗಳಲ್ಲಿ ಪಾಲ್ಗೊಂಡರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

