AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sigandur Bridge: ಸಿಂಗಾರಗೊಂಡು ಕಂಗೊಳಿಸುತ್ತಿದೆ ಸಿಗಂದೂರು ಸೇತುವೆ, ವಿಡಿಯೋ ಇಲ್ಲಿದೆ

Sigandur Bridge: ಸಿಂಗಾರಗೊಂಡು ಕಂಗೊಳಿಸುತ್ತಿದೆ ಸಿಗಂದೂರು ಸೇತುವೆ, ವಿಡಿಯೋ ಇಲ್ಲಿದೆ

ಗಣಪತಿ ಶರ್ಮಾ
|

Updated on: Jul 14, 2025 | 9:13 AM

Share

ಕರ್ನಾಟಕದ ಅತೀ ದೊಡ್ಡ ಕೇಬಲ್‌ ಸೇತುವೆಯಾಗಿರುವ ಶರಾವತಿ ಹಿನ್ನೀರಿನ ಸಿಗಂದೂರು ಸೇತುವೆಯು ಇಂದು ಲೋಕಾರ್ಪಣೆಯಾಗುತ್ತಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಸೇತುವೆ ಉದ್ಘಾಟಿಸುತ್ತಿದ್ದು, ಶರಾವತಿ ಮಡಿಲ ಮಕ್ಕಳ 6 ದಶಕಗಳ ಕನಸು ನನಸಾಗುತ್ತಿದೆ. ಲೋಕಾರ್ಪಣೆಗಾಗಿ ಸಿಂಗಾರಗೊಂಡು ನಿಂತಿರುವ ಸಿಗಂದೂರು ಸೇತುವೆಯ ವಿಡಿಯೋ ಇಲ್ಲಿದೆ.

ಶಿವಮೊಗ್ಗ, ಜುಲೈ 14: ಶಿವಮೊಗ್ಗ ಜನರ ಬಹು ವರ್ಷಗಳ ಕನಸಾಗಿರುವ ಸಿಗಂದೂರು ಸೇತುವೆ ಇಂದು ಲೋಕಾರ್ಪಣೆಯಾಗುತ್ತಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇತುವೆಯನ್ನು ಇಂದು ಲೋಕಾರ್ಪಣೆಗೊಳಿಸುತ್ತಿದ್ದು, ಹೀಗಾಗಿ ಸೇತುವೆಯನ್ನು ಅಲಂಕೃತಗೊಳಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಇದಾಗಿದ್ದು, ದೇಶದ ಅತಿದೊಡ್ಡ ಕೇಬಲ್ ಆಧಾರಿತ ಬ್ರಿಡ್ಜ್​ಗಳಲ್ಲಿ ಒಂದಾಗಿದೆ. ಸೇತುವೆಯ ವಿಡಿಯೋ ನೋಟ ಇಲ್ಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More