ದೊಡ್ಡ ತಿಮಿಂಗಲ ಸರ್ಕಾರದ ಭಾಗವಾಗಿದೆ, ಅದನ್ನು ಬಂಧಿಸುವವರು ಯಾರು? ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: May 14, 2024 | 2:26 PM

ಕಾಂಗ್ರೆಸ್ ಶಾಸಕ ಪಿ ರವಿಕುಮಾರ್ ಗೌಡ ಗಣಿಗ, ಕುಮಾರಸ್ವಾಮಿಯವರನ್ನು ಹಿಟ್ ಅಂಡ್ ರನ್ ಅಂತ ಮೂದಲಿಸಿರುವುದಕ್ಕೆ ತಿರುಗೇಟು ನೀಡಿದ ಮಾಜಿ ಮುಖ್ಯಮಂತ್ರಿ, ತಾನು ಬೇರೆಯವರಂತೆ ಅಶ್ಲೀಲ ವಿಡಿಯೋಗಳನ್ನು ಬಿಡಲ್ಲ, ವರ್ಗಾವಣೆ ವಿಷಯದಲ್ಲಿ ನೊಂದ ಅಧಿಕಾರಿಗಳ ಬಗ್ಗೆ ಪೆನ್ ಡ್ರೈವ್ ಬಿಡ್ತೇನೆ, ಅದನ್ನು ರೆಡಿ ಮಾಡಲು ತಾನು ವಿದೇಶಗಳಿಗೆ ಹೋಗಿಲ್ಲ ಎಂದು ಹೇಳಿದರು.

ಬೆಂಗಳೂರು: ನಗರಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy), ಹೆಚ್ ಡಿ ರೇವಣ್ಣ (HD Revanna) ಬಂಧನ ಪ್ರಕರಣದಲ್ಲಿ ವಕೀಲರು ನಡೆಸಿದ ವಾದವಿವಾದಗಳನ್ನು ಗಮನಿಸಿದರೆ, ಕೇವಲ ದ್ವೇಷದ ರಾಜಕಾರಣ ಮತ್ತು ಹೆಚ್ ಡಿ ದೇವೇಗೌಡರ (HD Devegowda) ಹೆಸರಿಗೆ ಕಳಂಕ ಮೆತ್ತಲು ಅವರನ್ನು ಜೈಲಿಗೆ ಕಳಸಿದ್ದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ ಎಂದು ಹೇಳಿದರು. ಕಾಂಗ್ರೆಸ್ ಶಾಸಕ ಪಿ ರವಿಕುಮಾರ್ ಗೌಡ ಗಣಿಗ, ಕುಮಾರಸ್ವಾಮಿಯವರನ್ನು ಹಿಟ್ ಅಂಡ್ ರನ್ ಅಂತ ಮೂದಲಿಸಿರುವುದಕ್ಕೆ ತಿರುಗೇಟು ನೀಡಿದ ಮಾಜಿ ಮುಖ್ಯಮಂತ್ರಿ, ತಾನು ಬೇರೆಯವರಂತೆ ಅಶ್ಲೀಲ ವಿಡಿಯೋಗಳನ್ನು ಬಿಡಲ್ಲ, ವರ್ಗಾವಣೆ ವಿಷಯದಲ್ಲಿ ನೊಂದ ಅಧಿಕಾರಿಗಳ ಬಗ್ಗೆ ಪೆನ್ ಡ್ರೈವ್ ಬಿಡ್ತೇನೆ, ಅದನ್ನು ರೆಡಿ ಮಾಡಲು ತಾನು ವಿದೇಶಗಳಿಗೆ ಹೋಗಿಲ್ಲ ಎಂದು ಹೇಳಿದರು. ಪ್ರಜ್ವಲ್ ವಿಡಿಯೋಗಳ ಹಂಚಿಕೆಯಲ್ಲಿ ಹಾಸನ ಅಭ್ಯರ್ಥಿಯೇ ಶಮೀಲಾಗಿದ್ದಾರೆ, ಇವೆಲ್ಲ ಸಣ್ಣ ಸಣ್ಣ ಮೀನುಗಳು, ದೊಡ್ಡ ತಿಮಿಂಗಲವನ್ನು ಹಿಡಿದು ವಿಚಾರಣೆ ನಡೆಸಿದರೆ ಎಲ್ಲ ವಿಷಯಗಳು ಬಯಲಿಗೆ ಬರುತ್ತವೆ, ಆದರೆ ತಿಮಿಂಗಿಲ ಸರ್ಕಾರದ ಭಾಗವಾಗಿರುವುದರಿಂದ ಬಂಧಿಸುವವರು ಯಾರು? ಎಂದು ಕುಮಾರಸ್ವಾಮಿ ಹೇಳಿದರು. ದೇವರಾಜೇಗೌಡ ದೊಡ್ಡ ತಿಮಿಂಗಲದ ಜೊತೆ ನಡೆಸಿದ ಮಾತುಕತೆಯ ಆಡಿಯೋ ಬಿಡುಗಡೆ ಮಾಡಿದ್ದಕ್ಕೆ ಅವರನ್ನು ಬಂಧಿಸಿ ಜೈಲಿಗೆ ಅಟ್ಟಲಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಪೆನ್ ಡ್ರೈವ್ ಪಬ್ಲಿಕ್ ಆಗುವ ಮೊದಲು ದೇವರಾಜೇಗೌಡ ಕುಮಾರಸ್ವಾಮಿಯನ್ನು ಭೇಟಿಯಾಗಿದ್ದು ಯಾಕೆ ಚರ್ಚೆಯಾಗುತ್ತಿಲ್ಲ? ಚಲುವರಾಯಸ್ವಾಮಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.