ಹುಲಿ ಉಗರು ಪ್ರಕರಣ: ಪಕ್ಕಾ ಸಸ್ಯಾಹಾರಿಯಾಗಿರುವ ನನ್ನ ಮನೆಯಲ್ಲಿ ಹುಲಿಯುಗುರು ಹೇಗೆ ಬಂದೀತು? ಲಕ್ಷ್ಮಿ ಹೆಬ್ಬಾಳ್ಕರ್

Updated on: Oct 27, 2023 | 12:36 PM

ರಾಜ್ಯದಲ್ಲಿ ಅನೇಕ ಜನ ವನ್ಯಜೀವಿ ಉತ್ಪನ್ನಗಳಾದ ಜಿಂಕೆ ಕೊಂಬು, ಹುಲಿಯುಗುರು ಮೊದಲಾದವುಗಳನ್ನು ಮನೆಯಲ್ಲಿ ಇಟ್ಟುಕೊಂಡಿರಬಹುದು, ಸರ್ಕಾರ ಮತ್ತು ಅರಣ್ಯ ಇಲಾಖೆ ಅವುಗಳನ್ನು ಜಪ್ತು ಮಾಡಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುವುದು ಒಳಿತು ಎಂದರು.

ಬೆಳಗಾವಿ: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ತಾವೊಬ್ಬ ಪಕ್ಕಾ ಸಸ್ಯಾಹಾರಿ (vegetarian) ಆಗಿರೊದ್ರಿಂದ ತಮ್ಮ ಮನೆಯಲ್ಲಿ ವನ್ಯಜೀವಿ ಉತ್ಪನ್ನಗಳು ಬರೋದು ಸಾಧ್ಯವೇ ಇಲ್ಲ ಎಂದು ಹೇಳಿದರು. ತಮ್ಮ ಮಗ ಮೃಣಾಲ್ ಹೆಬ್ಬಾಳ್ಕರ್ (Mrinal Hebbalkar) ಧರಿಸಿದ್ದು ಹುಲಿ ಉಗುರಿನಂತೆ ಕಾಣುವ ಪ್ಲಾಸ್ಟಿಕ್ ಪೆಂಡೆಂಟ್, ಯಾರೋ ಅವನಿಗೆ ಉಡುಗೊರೆ ರೂಪದಲ್ಲಿ ನೀಡಿದ್ದು ಅಂತ ಹೇಳಿದ ಅವರು ಇವತ್ತಿನ ಕಾಲದಲ್ಲಿ ಅಸಲಿ ಹುಲಿಯುಗುರು ಸಿಗೋದು ಸಾಧ್ಯವೇ ಎಂದು ಪ್ರಶ್ನಿಸಿದರು. ಮೃಣಾಲ್ ಧರಿಸಿದ್ದ ಪೆಂಡೆಂಟನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಪೊರೆನ್ಸಿಕ್ ಲ್ಯಾಬ್ ಗೆ ಕಳಿಸಿ ತಪಾಸಣೆ ಮಾಡಿಸುತ್ತಾರೆ ಎಂದು ಸಚಿವರು ಹೇಳಿದರು. ಕಾನೂನು ಎಲ್ಲರಿಗೂ ಒಂದೇ; ಅದು ಲಕ್ಷ್ಮಿ ಹೆಬ್ಬಾಳ್ಕರ್ ಗೆ ಬೇರೆಯಾಗುವುದು ಸಾಧ್ಯವಿಲ್ಲ ಎಂದು ಹೇಳಿದ ಸಚಿವೆ, ರಾಜ್ಯದಲ್ಲಿ ಅನೇಕ ಜನ ವನ್ಯಜೀವಿ ಉತ್ಪನ್ನಗಳಾದ ಜಿಂಕೆ ಕೊಂಬು, ಹುಲಿಯುಗುರು ಮೊದಲಾದವುಗಳನ್ನು ಮನೆಯಲ್ಲಿ ಇಟ್ಟುಕೊಂಡಿರಬಹುದು, ಸರ್ಕಾರ ಮತ್ತು ಅರಣ್ಯ ಇಲಾಖೆ ಅವುಗಳನ್ನು ಜಪ್ತು ಮಾಡಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುವುದು ಒಳಿತು ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More