ಯೋಗೇಶ್ವರ್ ಪ್ರಭಾವಿ ನಾಯಕ ಕಾಂಗ್ರೆಸ್ಗೆ ಬಂದರೆ ಪಕ್ಷಕ್ಕೆ ಅನುಕೂಲ: ಹೆಚ್ಸಿ ಬಾಲಕೃಷ್ಣ
ಡಿಕೆ ಸುರೇಶ್ ಚನ್ನಪಟ್ಟಣದಿಂದ ಸ್ಪರ್ಧಿಸುವುದಿಲ್ಲ, ಅವರು ಚುನಾವಣಾ ರಾಜಕೀಯದಿಂದ ದೂರವುಳಿಯಲು ನಿರ್ಧರಿಸಿದ್ದಾರೆ, ಅವರು ಸ್ಪರ್ಧಿಸುವುದು ನಿಜವಾಗಿದ್ದರೆ ಇಷ್ಟೊತ್ತಿಗಾಗಲೇ ಅವರ ಹೆಸರಿನ ಆಧಿಕೃತ ಘೋಷಣೆಯಾಗಿರುತಿತ್ತು ಎಂದು ಶಾಸಕ ಬಾಲಕೃಷ್ಣ ಹೇಳಿದರು.
ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಾಂಗ್ರೆಸ್ ಶಾಸಕ ಹೆಚ್ ಸಿ ಬಾಲಕೃಷ್ಣ, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಬರೋದಾದ್ರೆ ಸ್ವಾಗತ, ಅವರೊಬ್ಬ ಪ್ರಭಾವಿ ನಾಯಕನಾಗಿರುವುದರಿಂದ ಪಕ್ಷಕ್ಕೆ ಒಳ್ಳೆಯದಾಗುತ್ತದೆ, ಹಾಗಂತ ಕಾಂಗ್ರೆಸ್ ಪಕ್ಷ ದುರ್ಬಲವೇನೂ ಅಲ್ಲ, ಅವರು ಬರಲಿ ಬಿಡಲಿ ಚನ್ನಪಟ್ಟಣದಲ್ಲಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲೋದಂತೂ ನಿಶ್ಚಿತ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಚನ್ನಪಟ್ಟಣ ಅಖಾಡದಲ್ಲಿ ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: ‘ಕೈ’ ತಂತ್ರಗಳು ಹೀಗಿವೆ ನೋಡಿ
Published On - 1:30 pm, Tue, 22 October 24