ಮುಡಾದಿಂದ 50:50 ನಿಯಮದಡಿ ಅಕ್ರಮವಾಗಿ ಪಡೆದಿರುವವರ ನಿವೇಶನ ರದ್ದು ಮಾಡಲು ಹೇಳುತ್ತೇನೆ: ಜಿಟಿ ದೇವೇಗೌಡ

ಅರುಣ್​ ಕುಮಾರ್​ ಬೆಳ್ಳಿ

Updated on: Nov 07, 2024 | 1:17 PM

ಮುಡಾ ಅಧ್ಯಕ್ಷರಾಗಿದ್ದ ಕೆ ಮರಿಗೌಡ ರಾಜೀನಾಮೆ ಸಲ್ಲಿಸಿದ ಬಳಿಕ ಜಿಲ್ಲಾಧಿಕಾರಿಯವರು ಅಧ್ಯಕ್ಷತೆ ವಹಿಸಿಕೊಂಡು ಕರೆಯುತ್ತಿರುವ ಮೊದಲ ಸಭೆ ಇದಾಗಿದೆ, ಸಭೆಗೆ ನಿರ್ದಿಷ್ಟವಾದ ಅಜೆಂಡಾ ಇಲ್ಲ, ಕಳೆದ ಬಾರಿ ಸಭೆಯ ನಡಾವಳಿಗಳಿಗೆ ಆಯುಕ್ತರು ಸಹಿ ಮಾಡದ ಕಾರಣ, ಆ ಸಭೆಯ ವಿಷಯಗಳನ್ನೇ ಚರ್ಚೆಗೆ ಎತ್ತಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ ಅಂತ ದೇವೇಗೌಡ ತಿಳಿಸಿದರು.

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಭಾಗವಹಿಸುವ ಮೊದಲು ಮಾಧ್ಯಮದವರೊಡನೆ ಮಾತಾಡಿದ ಮುಡಾ ಸದಸ್ಯ ಜಿಟಿ ದೇವೇಗೌಡ, ಕಳೆದ ಒಂದು ವರ್ಷದಿಂದ ಮುಡಾ ಕೆಟ್ಟ ಕಾರಣಗಳಿಗೆ ಸುದ್ದಿಯಲ್ಲಿದೆ, ಇದು ಎಲ್ಲರೂ ತಲೆ ತಗ್ಗಿಸುವ ವಿಚಾರ, ಮುಡಾದಲ್ಲಿ ಜಾರಿಯಲ್ಲಿರುವ 50:50 ನಿವೇಶನ ಹಂಚಿಕೆ ನಿಯಮವನ್ನು ರದ್ದು ಮಾಡಿ ಅಂತ ತಾನು ಸಭೆಯಲ್ಲಿ ಹೇಳಲ್ಲ, ಅದರೆ ಆ ನಿಯಮದಡಿ ಅಕ್ರಮವಾಗಿ ಪಡೆದಿರುವ ನಿವೇಶನಗಳ ನೋಂದಣಿಯನ್ನು ರದ್ದು ಮಾಡುವಂತೆ ಹೇಳುವುದಾಗಿ ತಿಳಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಜಿಟಿ ದೇವೇಗೌಡ ಮತ್ತು ತನ್ನ ನಡುವೆ ಮುನಿಸಿರುವದನ್ನು ಅಂಗೀಕರಿಸಿದ ಹೆಚ್​ಡಿ ಕುಮಾರಸ್ವಾಮಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.